Advertisement

ಸೋಂಕಿನಿಂದ ಮೃತಪಟ್ಟವರ ಅಸ್ಥಿ ವಿಸರ್ಜನೆ : ಅಶೋಕ್‌ ಕಾರ್ಯಕ್ಕೆ ಬಿ.ಎಲ್‌.ಸಂತೋಷ್‌ ಮೆಚ್ಚುಗೆ

10:38 PM Jun 02, 2021 | Team Udayavani |

ಬೆಂಗಳೂರು: ಕೊರೊನಾದಿಂದ ಮೃತಪಟ್ಟವರ ಅಸ್ಥಿಯನ್ನು ಕಾವೇರಿ ನದಿಯಲ್ಲಿ ಖುದ್ದಾಗಿ ವಿಸರ್ಜನೆ ಮಾಡಿದ ಕಂದಾಯ ಸಚಿವ ಆರ್‌.ಅಶೋಕ್‌ ಅವರ ಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ಸಚಿವ ಅಶೋಕ್‌ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ, ಉತ್ತಮ ಕೆಲಸ. ಇದರಿಂದ ಒಳ್ಳೆಯ ಸಂದೇಶ ರವಾನಿಸಿದಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನರು ನಿಮ್ಮ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿರುವುದನ್ನು ಗಮನಿಸಿರುವೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿ.ಎಲ್‌.ಸಂತೋಷ್‌ ಅವರು, ಕುಟುಂಬ ಸದಸ್ಯರು ಸ್ವೀಕರಿಸದ ಕೊರೊನಾದಿಂದ ಮೃತಪಟ್ಟವರ ಅಸ್ಥಿ ಕಂದಾಯ ಸಚಿವ ಅಶೋಕ್‌ ಅವರು ಕಾವೇರಿಯಲ್ಲಿ ವಿಸರ್ಜನೆ ಮಾಡಿದ್ದಾರೆ. ಇದೊಂದು ಮಾನವೀಯತೆಯ ಕಾರ್ಯ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next