Advertisement

ಸಾರ್ವಜನಿಕರು ಅನಗತ್ಯ ಓಡಾಟ ನಿಲ್ಲಿಸಿ :ರಾಜ್ಯದ ಜನತೆಯಲ್ಲಿ ಆರ್.ಅಶೋಕ್ ಮನವಿ

10:45 AM Jun 20, 2020 | sudhir |

ಬೆಂಗಳೂರು ; ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರು ತಮ್ಮ ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ಮನವಿ ಮಾಡಿದ್ದಾರೆ.

Advertisement

ಕೋವಿಡ್ ಸೋಂಕಿನ ಕುರಿತಾಗಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಸಚಿವರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ ಆದುದರಿಂದ ನಮ್ಮ ನಮ್ಮ ಆರೋಗ್ಯದ ದೃಷ್ಟಿಯಿಂದ ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕಾಗಿದೆ, ಅಲ್ಲದೆ ಅಗತ್ಯ ಕಾರ್ಯಗಳಿಗೆ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡತಕ್ಕದು. ಸಾಮಾಜಿಕ ಅಂತರ ಕಾಯ್ದುಕೊಂಡೆ ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರ ಕೆಲಸಗಳನ್ನು ನಡೆಸಬೇಕಾಗಿ ವಿನಂತಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.

ಕೋವಿಡ್ ಸೋಂಕಿನಿಂದ ನಮ್ಮಮ್ಮ ನಾವೇ ರಕ್ಷಣೆ ಮಾಡಿಕೊಳ್ಳಬೇಕಾಗಿದೆ ಹಾಗಾಗಿ ಅಗತ್ಯ ಇದ್ದಾರೆ ಮಾತ್ರ ಮನೆಯಿಂದ ಹೊರಗೆ ಬನ್ನಿ ಅನಾವಶ್ಯಕವಾಗಿ ಹೊರಗಡೆ ತಿರುಗಾಡಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next