Advertisement

ಆರ್‌.ಎಲ್.ಜಾಲಪ್ಪ ಆರೋಗ್ಯ ವಿಚಾರಿಸಿದ ಸಿದ್ಧರಾಮಯ್ಯ

12:22 PM Dec 13, 2021 | Team Udayavani |

 ದೊಡ್ಡಬಳ್ಳಾಪುರ: ಕೇಂದ್ರದ ಮಾಜಿ ಸಚಿವ ಹಾಗೂ ತಾಲೂಕಿನ ಹಿರಿಯ ರಾಜಕಾರಣಿ ಆರ್‌.ಎಲ್‌.ಜಾಲಪ್ಪ ಅವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು , ಕೋಲಾರದ ಆರ್‌.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‌

Advertisement

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಆರ್‌.ಎಲ್. ಜಾಲಪ್ಪ ಅವರನ್ನು ಭೇಟಿಯಾದ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯವನ್ನು ವಿಚಾರಿಸಿದರು. ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಾಯಕರಾದ ಜಾಲಪ್ಪ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿ ದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:- ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

ಈ ವೇಳೆ ಶಾಸಕ ನಾರಾಯಣ ಸ್ವಾಮಿ, ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಮುಖಂಡರಾದ ಖಯ್ಯೂಂ, ಅನಿಲ್‌ ಕುಮಾರ್‌, ದೇವರಾಜ ಅರಸು ವಿದ್ಯಾಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ ಮತ್ತಿತರರು ಹಾಜರಿದ್ದರು. ಆರ್‌.ಎಲ್. ಜಾಲಪ್ಪ ಅವರು ಶೀಘ್ರ ಗುಣಮುಖರಾಗುವಂತೆ ತಾಲೂಕಿನ ರಾಜಕೀಯ ಮುಖಂಡರು, ಗಣ್ಯರು ಹಾಗೂ ದೇವರಾಜ ಅರಸು, ಆರ್‌.ಎಲ್. ಜಾಲಪ್ಪ ವಿದ್ಯಾಸಂಸ್ಥೆಯ ಸಿಬ್ಬಂದಿ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next