Advertisement

ಅಭಿವೃದ್ಧಿಗೆ ದುಡಿದಿದ್ದೇನೆ, ನನಗೆ ಟಿಕೆಟ್ ಕೊಡಿ: ಶಂಕರ್ ಆಗ್ರಹ!

09:42 AM Nov 16, 2019 | Mithun PG |

ಬೆಂಗಳೂರು: ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಬಿಜೆಪಿ ಟಿಕೆಟ್ ನೀಡಲೇಬೇಕು. ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡಲೇಬೇಕು ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ನನಗೆ ವಿಧಾನಪರಿಷತ್ ಸದಸ್ಯ ಸ್ಥಾನದ ಅಗತ್ಯವಿಲ್ಲ. ಎರಡು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಹಾಗಾಗಿ ಟಿಕೆಟ್ ನೀಡಬೇಕು ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.‌

ಗುರುವಾರ ಪ್ರಕಟವಾಗಿದ್ದ ಉಪಚುನಾವಣೆ ಬಿಜೆಪಿ ಸ್ಪರ್ಧಾಳುಗಳ ಪಟ್ಟಿಯಲ್ಲಿ ರಾಣೆಬೆನ್ನೂರು ಕ್ಷೇತ್ರಕ್ಕೆ ಯಾರನ್ನೂ ಹೆಸರಿಸಿರಲಿಲ್ಲ. ಬಿಎಸ್ ವೈ ಅವರು ಶಂಕರ್ ಅವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡುವ ಇಂಗಿತ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next