Advertisement

ಸಿದ್ದರಾಮಯ್ಯ ಜೊತೆ ದೆಹಲಿಯಲ್ಲಿ ಕಾಣಿಸಿಕೊಂಡ ಪಕ್ಷೇತರ ಶಂಕರ್‌

09:25 AM May 26, 2019 | Team Udayavani |

ಹೊಸದಿಲ್ಲಿ: ಲೋಕಸಭಾ ಚುನಾವಣಾ ಫ‌ಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ಮೈತ್ರಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಎದುರಾಗಿದ್ದು, ಆಪರೇಷನ್‌ ಕಮಲ ನಡೆದು ಬಿಜೆಪಿ ಸರ್ಕಾರ ರಚನೆಯಾಗುವ ಬಗ್ಗೆ ಹೇಳಲಾಗುತ್ತಿರುವ ಬೆನ್ನಲ್ಲೇ ಪಕ್ಷೇತರ ಶಾಸಕ ಆರ್‌.ಶಂಕರ್‌ ಅವರು ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

Advertisement

ರಾಣೆಬೆನ್ನೂರು ಶಾಸಕ, ಮಾಜಿ ಸಚಿವ ಶಂಕರ್‌ ಅವರು ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳಿದ್ದು ಹೈಕಮಾಂಡ್‌ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ.

ಬಿಜೆಪಿ ನಾಯಕರು ಪಕ್ಷೇತರ ಶಾಸಕರಿಬ್ಬರು ನಮ್ಮೊಂದಿಗೆ ಇದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿ ಹಾಕಿರುವ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ಸಿದ್ದರಾಮಯ್ಯ ಶಾಕ್‌ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next