Advertisement

ಅನಧಿಕೃತವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಪಡಿತರ ವಶ

06:36 PM Apr 15, 2020 | keerthan |

ಬನಹಟ್ಟಿ: ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

Advertisement

ಇದಕ್ಕೆ ಸಂಬಂಧಿದಸಿದಂತೆ ಲಾರಿ, 50 ಕೆಜಿಯ 257 ಚೀಲದಲ್ಲಿ 2,05,050 ರೂ. ಮೊತ್ತದ ಅಕ್ಕಿ, 50 ಕೆಜಿಯ 26 ಚೀಲದ 27, 300 ರೂ ಮೊತ್ತದ ಪಡಿತರ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತೇರದಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಆಹಾರ ಶಿರಸ್ತೇದಾರರಾದ ಡಿ. ಬಿ. ದೇಶಪಾಂಡೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next