Advertisement

Rabkavi-Banahatti: ಮಾನಸಿಕ ಅಸ್ವಸ್ಥ ಮಹಿಳೆ ಹಳ್ಳಕ್ಕೆ ಬಿದ್ದು ಸಾವು

08:22 PM Sep 03, 2023 | Team Udayavani |

ರಬಕವಿ-ಬನಹಟ್ಟಿ : ಖಿನ್ನತೆಗೊಳಗಾಗಿ ಮಾನಸಿಕ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬಳು ರಬಕವಿ-ಬನಹಟ್ಟಿ ತಾಲೂಕಿನ ಹೊಸೂರಿನ ಶಾಂತಿ ನಗರಕ್ಕೆ ತೆರಳುವ ಮಧ್ಯದಲ್ಲಿರುವ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

Advertisement

ಮೃತಳನ್ನು ಜ್ಯೋತಿ ಮಲ್ಲಪ್ಪ ಕುಂಬಾರ(30) ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಹಳ್ಳದಿಂದ ಹೊರತೆಗೆದಾಗ ಮೃತಳ ಗುರುತು ಪತ್ತೆಯಾಗಿದೆ. ಮೃತಳು ಕಳೆದ ಎರಡು ದಿನಗಳಿಂದ ತೀವ್ರ ಮಾನಸಿಕ ಅಸ್ವಸ್ಥಳಾಗಿದ್ದ ಕಾರಣ ಭಾನುವಾರ ನಸುಕಿನ ಜಾವ ಮನೆಯಿಂದ ತೆರಳಿ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆಂದು ದೂರಿನಲ್ಲಿ ದಾಖಲಾಗಿದೆ.

ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ರಾಘವೇಂದ್ರ ಖೋತ ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next