Advertisement

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

06:33 PM Apr 11, 2024 | Team Udayavani |

ಬೀದರ್: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ‌ ಜಯಭೇರಿ‌ ನಿಶ್ಚಿತ. ಕಳೆದ ಚುನಾವಣೆಯಲ್ಲಿ ಕೈತಪ್ಪಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಈ ಬಾರಿ ಕಮಲ ಅರಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸಭೆ ಚುನಾವಣೆ ಉಸ್ತುವಾರಿ ರಾಧಾ ಮೋಹನದಾಸ ಅಗರ್ವಾಲ್ ಹೇಳಿದ್ದಾರೆ.

Advertisement

ಬೀದರ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದ ‌ಎರಡು ಅವಧಿಯಲ್ಲಿ‌ ಉತ್ತಮ ಕೆಲಸ ಮಾಡಿದೆ. ಮತ್ತೊಮ್ಮೆ ಮೋದಿ‌ ಸರ್ಕಾರ, ದೇಶದ ಜನರ ಆಶಯವಾಗಿದೆ ಎಂದು ಹೇಳಿದರು.

ಬೀದರ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಈ ಬಾರಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Vijayapura: ಸಿಡಿಲು ಬಡಿದು ಕುರಿಗಾಯಿ ಬಾಲಕ ಮೃತ್ಯು… ಕುಟುಂಬಕ್ಕೆ ಆಸರೆಯಾಗಿದ್ದ

Advertisement

Udayavani is now on Telegram. Click here to join our channel and stay updated with the latest news.

Next