Advertisement

‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ರಾಧಿಕಾ ನಾರಾಯಣ್ ಎಂಟ್ರಿ

02:22 PM Nov 06, 2022 | Team Udayavani |

ದೂದ್‌ ಪೇಡ ದಿಗಂತ್‌ ಅಭಿನಯದ “ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ “ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡದ ಕಡೆಯಿಂದ ಹೊಸದೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಸಿನಿಮಾಕ್ಕೆ ರಾಧಿಕಾ ನಾರಾಯಣ್‌ ಎಂಟ್ರಿಕೊಟ್ಟಿದ್ದಾರೆ.

Advertisement

ಹೌದು, “ರಂಗಿತರಂಗ’ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಟಿ ರಾಧಿಕಾ ನಾರಾಯಣ್‌ “ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್‌ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟಿ ನಿಧಿ ಸುಬ್ಬಯ್ಯ ಚಿತ್ರತಂಡಕ್ಕೆ ಸೇರಿಕೊಂಡಿದ್ದು, ಈಗ ರಾಧಿಕಾ ನಾರಾಯಣ್‌ ಎಂಟ್ರಿ ಮೂಲಕ “ಎಡಗೈ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ಮತ್ತೂಂದು ತಾರಾ ಬಲ ಬಂದಂತಾಗಿದೆ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲಾಕ್‌ ಕಾಮಿಡಿ ಹಾಗೂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್‌ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ. “ಹೈಫ‌ನ್‌ ಪಿಕ್ಚರ್’ ಬ್ಯಾನರ್‌ನಡಿ ಗುರುದತ್‌ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್‌ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಉಳಿದಂತೆ ಭಜರಂಗಿ ಲೋಕಿ, ಕೃಷ್ಣ ಹೆಬ್ಟಾಳೆ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಅಭಿಮನ್ಯು ಸದಾನಂದ್‌ ಛಾಯಾಗ್ರಹಣ, ರಾಹುಲ್‌ ವಿ ಪಾರ್ವತಿಕರ್‌ ಹಾಗೂ ಶ್ರೀಪಾದ್‌ ಜೋಶಿ ಸಂಭಾಷಣೆಯಿದೆ. ಎಲ್ಲ ಅಂದು ಕೊಂಡಂತೆ ನಡೆದರೆ, ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ

Advertisement

Udayavani is now on Telegram. Click here to join our channel and stay updated with the latest news.

Next