Advertisement

ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆ

12:13 PM Jan 21, 2021 | Team Udayavani |

ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ನಿಯಂತ್ರಿಸಲು ನಾಲ್ಕಕ್ಕೆ ರೆಡಿಯೋ ಕಾಲರ್‌ ಅಳವಡಿಸುವ ಕಾರ್ಯಾಚರಣೆ ಜ.21ರಿಂದ ಆರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್‌.ಬಸವರಾಜು ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಉಪಟಳ ನೀಡುತ್ತಿರುವ ಒಂಟಿ ಸಲಗ, ಮೂರು ಹೆಣ್ಣಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಸುವ ಕಾರ್ಯಾಚರಣೆ ಜ.27ರವರೆಗೆ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಮತ್ತಿಗೋಡು ಆನೆ ಕ್ಯಾಂಪ್‌ನಿಂದ ಅಭಿಮನ್ಯು ಸೇರಿ ಮೂರು ಆನೆಗಳನ್ನು ಕಾರ್ಯಾಚರಣೆಗೆ ಬಳಲಾಗುತ್ತಿದೆ. ಈಗಾಗಲೇ ಆಲೂರು ತಾಲೂಕಿನ ನಾಗಾವರದ ಶಿಬಿರಕ್ಕೆ ಮೂರು ಸಾಕಾನೆಗಳು ಬಂದಿಳಿದಿವೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಅನುಮತಿ ಪಡೆದು ಕಾರ್ಯಾಚರಣೆ: ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆಗೆ ಅಭಿಮನ್ಯು ಸೇರಿದಂತೆ ಮೂರು ಕಾಡಾನೆ ಮತ್ತು 30 ಮಂದಿ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಒಂಟಿ ಸಲಗವನ್ನು ಸೆರೆಡಿದು ರೆಡಿಯೋ ಕಾಲರ್‌ ಅಳವಡಿಸಿ ಅದನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. ಇನ್ನುಳಿದ ಮೂರು ಮೂರು ಹೆಣ್ಣಾನೆಗೆ ರೆಡಿಯೋ ಕಾಲರ್‌ಗಳನ್ನು ಮರು ಅಳವಡಿಸಿ ನಂತರ ಸೆರೆಡಿದ ಸ್ಥಳದಲ್ಲಿಯೇ ಬಿಡಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅನುಮತಿ ಪಡೆದು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಡಾನೆಗಳು ನಾಡಿಗೆ ಬಂದು ಸಾರ್ವಜನಿಕರಿಗೆ ಹಾನಿ ಮಾಡುತ್ತಿರುವ ಕೆಲವು ಪುಂಡಾನೆಗಳನ್ನು ಆಯ್ಕೆ ಮಾಡಿ, ಅವುಗಳ ಚಲನ- ವಲನ ಕಂಡುಹಿಡಿದು ಹಾನಿ ಮಾಡುವುದನ್ನು ತಡೆಗಟ್ಟಲು ಅನುಕೂಲವಾಗುವಂತೆ ರೆಡಿಯೋ ಕಾಲರ್‌ ಅಳವಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಹಕ್ಕಿ ಜ್ವರ ಇಲ್ಲ, ಧೈರ್ಯವಾಗಿ ಕೋಳಿ ಮಾಂಸ ತಿನ್ನಿ

ಆನೆ ಸಮಸ್ಯೆಗೆ ಶಾಶ್ವತ ಕ್ರಮ ಕೈಗೊಳ್ಳಲಿ

Advertisement

ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು, ಗ್ರಾಮಗಳೊಳಗೆ ಕಾಡಾನೆಗಳು ಹಾಡ ಹಗಲೇ ಸಂಚರಿಸುತ್ತಿವೆ. ಕಾಡಾನೆಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಮಲೆನಾಡ ಜನರು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಆನೆ ಕಾರಿಡಾರ್‌ ನಿರ್ಮಾಣ ಸೇರಿದಂತೆ ಶಾಶ್ವತ ಕ್ರಮಗಳನ್ನು ಕೈಗೊಳ್ಳದೆ ಪ್ರತಿಭಟನೆಗಳು ಹೆಚ್ಚಿದಾಗ ಒಂದೆರೆಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ. ಈಗ ಕಾಡಾನೆಗಳಿಗೆ ರೆಡಿಯೋ ಕಾಲರ್‌ ಅಳವಡಿಕೆ ಮಾಡುವುದರಿಂದ ಕಾಡಾನೆಗಳ ಹಾವಳಿ ತಡೆಯಲು ಸಾಧ್ಯವಿಲ್ಲ. ಶಾಶ್ವತ ಕ್ರಮಗಳ ಬಗ್ಗೆ ಸರ್ಕಾರ ಚಿಂತಿಸಬೇಕು ಎಂದು ಮಲೆನಾಡು ಪ್ರದೇಶದ ಜನರ ಆಗ್ರಹವಾಗಿದೆ.

ನಾಲ್ಕು ಆನೆಗಳಿಗೆ ರೆಡಿಯೋ ಕಾಲರ್‌, ಒಂದು ಆನೆ ಹಿಡಿದು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ಸರ್ಕಾರದ ಆದೇಶದಂತೆ ಗುರುವಾರದಿಂದ ಕಾರ್ಯಾಚರಣೆ ನಡೆಯಲಿದೆ. ದಸರಾ ಆನೆ ಅಭಿಮನ್ಯು, ಗಣೇಶ, ಗೋಪಾಲ ಕೃಷ್ಣ ಎನ್ನುವ ಆನೆ ಬಂದಿದೆ. ಉಳಿದ ಎರಡು ಬೆಳಗ್ಗೆ ಭಾಗಿಯಾಗಲಿವೆ. ಪೂಜೆ ಸಲ್ಲಿಸಿದ ಬಳಿಕ ಡಿಎಫ್ಒ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ.

ವಿನಯ್‌ಚಂದ್ರ, ವಲಯ ಅರಣ್ಯಾಧಿಕಾರಿ, ಆಲೂರು ತಾಲೂಕು

Advertisement

Udayavani is now on Telegram. Click here to join our channel and stay updated with the latest news.

Next