Advertisement

ಪಾರೀಕರ್ ಮನೇಲಿ ರಫೇಲ್ ಡೀಲ್ ಫೈಲ್;ಸಿಎಂಗೆ ಭದ್ರತೆ ನೀಡಲು ಕೈ ಮನವಿ!

11:57 AM Jan 05, 2019 | Sharanya Alva |

ನವದೆಹಲಿ:ಗೋವಾ ಮುಖ್ಯಮಂತ್ರಿ ಮನೋಹರ್ ಪಾರೀಕರ್ ಅವರ ಜೀವಕ್ಕೆ ಅಪಾಯವಿದೆ. ಈ ನಿಟ್ಟಿನಲ್ಲಿ ಅವರಿಗೆ ಬಿಗಿ ಭದ್ರತೆ ನೀಡಬೇಕೆಂದು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ರಫೇಲ್ ಡೀಲ್ ಫೈಲ್ ಪರ್ರೀಕರ್ ಬೆಡ್ ರೂಂನಲ್ಲಿದೆ?

ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮಾತನಾಡುತ್ತಿರುವ ಆಡಿಯೋ ಕ್ಲಿಪ್ ಬಹಿರಂಗವಾದ ಮೇಲೆ ಕಾಂಗ್ರೆಸ್ ಇಂದು ಸುದ್ದಿಗೋಷ್ಠಿ ನಡೆಸಿ ಸಿಎಂ ಪಾರೀಕರ್ ಗೆ ಭದ್ರತೆ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವುದಾಗಿ ಹೇಳಿದೆ.

ರಫೇಲ್ ಡೀಲ್ ಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಬಹಿರಂಗವಾದರೆ, ಡೀಲ್ ನಲ್ಲಿ ನಡೆದಿರುವ ಭ್ರಷ್ಟಾಚಾರ ಸಾಬೀತಾಗುತ್ತದೆ. ಹೀಗಾಗಿ ಯಾರಿಗೆ ಈ ವಿವರ ಬೇಕಾಗಿದೆಯೋ ಅವರು ಇದನ್ನು ಸಾರ್ವಜನಿಕವಾಗಿ ಬಹಿರಂಗವಾಗಲು ಬಿಡಲ್ಲ ಎಂದು ಪತ್ರದಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

Advertisement

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಆಡಿಯೋವನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ಕಳೆದ ವಾರ ನಡೆದ ಗೋವಾ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಪಾರೀಕರ್ ಅವರು ರಫೇಲ್ ಡೀಲ್ ಗೆ ಸಂಬಂಧಿಸಿದ ಎಲ್ಲಾ ಫೈಲ್ ಹಾಗೂ ದಾಖಲೆಗಳು ನನ್ನ ಬೆಡ್ ರೂಂನಲ್ಲಿ ಇದೆ ಎಂದು ಹೇಳಿದ್ದಾರೆಂಬ ಮಾತು ದಾಖಲಾಗಿದೆ!

ಈ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸಿಎಂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ರಫೇಲ್ ಡೀಲ್ ಗೆ ಸಂಬಂಧಿಸಿದ ಫೈಲ್ಸ್ ಗಳು ಪಾರೀಕರ್ ಮನೆಯಲ್ಲಿದೆ ಎಂಬುದು ಆಡಿಯೋ ಸ್ಪಷ್ಟಪಡಿಸಿದೆ ಎಂದು ಹೇಳಿದ್ದರು.

ಈ ಟೇಪ್ ಕಾಂಗ್ರೆಸ್ ಪ್ರಾಯೋಜಿತ ಎಂದು ಬಿಜೆಪಿ ತಿರುಗೇಟು ನೀಡಿದೆ. ಹತಾಶ ಕಾಂಗ್ರೆಸ್ ಪಕ್ಷ ಕಟ್ಟುಕಥೆಯನ್ನೇ ಸತ್ಯ ಮಾಡಲು ಹೊರಟಿದೆ ಎಂದು ಮನೋಹರ್ ಪಾರೀಕರ್ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next