Advertisement

ಸಾಧಕರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ

05:40 AM Jan 28, 2019 | Team Udayavani |

ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ, ಗೌರವಿಸುತ್ತ ಬಂದಿರುವ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಇತ್ತೀಚೆಗೆ 2018 ರ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಿತ್ತು. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದ ಸಂಘದ ಆಡಿಟೋರಿಯಂನಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆದಿದ್ದು ವಿಶೇಷ.

Advertisement

2018ನೇ ಸಾಲಿನ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಭಾಜನರಾದ ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಹಿರಿಯ ಅಂಕಣಕಾರ ಬನ್ನಂಜೆ ಗೋವಿಂದಾಚಾರ್ಯ, ಹಿರಿಯ ನಟಿ ಸತ್ಯಭಾಮಾ, ಹಿರಿಯ ನಿರ್ದೇಶಕ ಪಿ. ವಾಸು, ನಿರ್ದೇಶಕ ರಿಷಭ್‌ ಶೆಟ್ಟಿ, ಚಂಪಾ ಶೆಟ್ಟಿ, ಕಾರ್ತಿಕ್‌ ಸರಗೂರು, ಗೀತಸಾಹಿತಿ ಕೆ. ಕಲ್ಯಾಣ್‌, ಯುವ ಸಂಗೀತ ನಿರ್ದೇಶಕ ವಾಸುಕಿ ವೈಭವ್‌ ಸೇರಿದಂತೆ ಹಲವರನ್ನು ಈ ಸಂದರ್ಭದಲ್ಲಿ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಉಪಸ್ಥಿತರಿದ್ದರು. ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಪರವಾಗಿ ಸುಧೀಂದ್ರ ವೆಂಕಟೇಶ್‌, ಸುನೀಲ್‌, ವಾಸುದೇವ್‌ ಕಾರ್ಯಕ್ರಮವನ್ನು ಆಯೋಜಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next