Advertisement

ಶ್ರದ್ಧಾಭಕ್ತಿಯ ರಾಘವೇಂದ್ರ ಶ್ರೀಗಳ ಮಧ್ಯಾರಾಧನೆ

03:08 PM Aug 06, 2020 | mahesh |

ಬಳ್ಳಾರಿ: ನಗರದ ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಗುರು ಸಾರ್ವಭೌಮ ಮಂತ್ರಾಲಯದ ಗುರು ರಾಘವೇಂದ್ರ ಶ್ರೀಗಳ 349ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಶ್ರದ್ದಾಭಕ್ತಿಯಿಂದ ಬುಧವಾರ ನಡೆಯಿತು. ಶ್ರೀಗಳ ವೃಂದಾವನಕ್ಕೆ ಬೆಳಗಿನ ಜಾವ 7 ಗಂಟೆಗೆ ಶ್ರೀಗಳ ಪಾದಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ 12 ಗಂಟೆಗೆ ಅಷ್ಟೋದಕ ಹಾಗೂ ಮಂಗಳಾರತಿ ಕಾರ್ಯಕ್ರಮ ನಡೆಯಿತು. ಮಠದ ಶ್ರೀಗಳು
ಮಂತ್ರಘೋಷಗಳೊಂದಿಗೆ ವಿಶೇಷ ಪೂಜೆ, ಅಭಿಷೇಕ, ಪುಷ್ಪಾಲಂಕಾರ ಮಾಡಿ ಮಂಗಳರಾತಿ ಮಾಡಿದರು. ಈ ವೇಳೆ ಬ್ರಾಹ್ಮಣ ಸಮಾಜದ ಮುಖಂಡರಾದ ಡಾಕ್ಟರ್‌ ಬಿ.ಕೆ.ಸುಂದರ್‌, ಡಾಕ್ಟರ್‌ ಶ್ರೀನಾಥ್‌, ಬಿಜೆಪಿ ನಗರ ಅಧ್ಯಕ್ಷ ವೆಂಕಟೇಶ್ವರ, ಪ್ರಧಾನ ಕಾರ್ಯದರ್ಶಿ ರಾಮಾಂಜಿನಿ, ಕೆ.ಎಸ್‌.ಅಸೋಕ್‌ ಕುಮಾರ್‌,  ನೇಮಕಲ್‌ರಾವ್‌ ಇದ್ದರು.

Advertisement

ವಿಶೇಷ ಅಲಂಕಾರ
ಸಿರುಗುಪ್ಪ: ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನ ಮಹೋತ್ಸವದ ಮಧ್ಯಾರಾಧನೆ ಅಂಗವಾಗಿ ಬುಧವಾರ ಬೆಳಗ್ಗೆ 6.30ಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ನಿರ್ಮಾಲ್ಯ, ಪಂಚಾಮೃತಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಯಿತು. ನಗರದ ಭಕ್ತರು ಶ್ರೀರಾಘವೇಂದ್ರ ಸ್ವಾಮಿಯ ಅಷ್ಟೋತ್ತರ ನಾಮಾವಳಿಗಳನ್ನು ಪಠಿಸಿದರು. ಅಲ್ಲದೆ ರಾಯರ ಕುರಿತು ವಿವಿಧ ಭಕ್ತಿಗೀತೆಗಳನ್ನು ಹಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next