Advertisement

ರಾಘವೇಂದ್ರ ಗೆಲುವು ನಿಶ್ಚಿತ: ಕೆ.ಎಸ್‌.ಈಶ್ವರಪ್ಪ

06:20 AM Oct 16, 2018 | Team Udayavani |

ಶಿವಮೊಗ್ಗ: ಲೋಕಸಭೆ ಉಪಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

Advertisement

ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರದ ಸಾಧನೆ, ಬಿಜೆಪಿ ಸಂಘಟನೆ ಹಾಗೂ ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಸಿ ಯಶಸ್ವಿಯಾಗಿದ್ದೆವು. ಈ
ಚುನಾವಣೆಯಲ್ಲಿಯೂ ಇದೇ ಅಂಶಗಳನ್ನಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತಿದೆ ಎಂದರು.

ಶಿವಮೊಗ್ಗ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಬಿಜೆಪಿ ಶಾಸಕರಿದ್ದು ಈ ಚುನಾವಣೆಯಲ್ಲಿ
ಅನುಕೂಲವಾಗಲಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಒಂದಾಗಿ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಿವೆ ಎಂದು ಕ್ಷೇತ್ರದ ಜನ ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳು ಹೇಳುತ್ತಿವೆ ಎಂದರು.

ರಾಹುಕೇತು ಬಗ್ಗೆ ತಿಳಿಸಿ: ಸಿದ್ದರಾಮಯ್ಯನವರು ಈ ಹಿಂದೆ ತನ್ನನ್ನು ಸೋಲಿಸಿದ್ದು ರಾಹುಕೇತುಗಳೆಂದು ಹೇಳಿದ್ದರು. ನಾಳೆ ನಾಮಪತ್ರ ಸಲ್ಲಿಕೆಗೆ ಮೈತ್ರಿ ಪಕ್ಷದವರು ಬರುತ್ತಿದ್ದಾರೆ. ಯಾರ ಜತೆ ಬರ್ತಿದ್ದಾರೆ ಗೊತ್ತು. ಈಗಲಾದರೂ ರಾಹುಕೇತು ಯಾರು ಅಂಥ ಸಿದ್ದರಾಮಯ್ಯ ಹೇಳಬೇಕು ಎಂದು ಈಶ್ವರಪ್ಪ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next