Advertisement

ಸಂಕಷ್ಟಕ್ಕೆ ಸ್ಪಂದಿಸುವಂತೆ ರಾಘವೇಶ್ವರ ಶ್ರೀ ಕರೆ

12:45 AM Aug 10, 2019 | Sriram |

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರ ಆಕ್ರಂದನ ಮುಗಿಲು ಮುಟ್ಟಿದ್ದು, ಶ್ರೀಮಠದ ಶಿಷ್ಯರು, ಭಕ್ತರು ಹಾಗೂ ಅಭಿಮಾನಿಗಳು ರಕ್ಷಣಾ ಹಾಗೂ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಕರೆ ನೀಡಿದ್ದಾರೆ.

Advertisement

ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯವಿದು. ನೊಂದವರ ಬದುಕನ್ನು ಕಟ್ಟಿ ಕೊಡಲು, ನಮ್ಮ ಸಂಪಾದನೆಯ ಒಂದಿಷ್ಟು ಮೊತ್ತವನ್ನು ಸಮರ್ಪಿಸಬೇಕಾದ ಹೊತ್ತು. ಆದ್ದರಿಂದ ಶ್ರೀಮಠದ ಶಿಷ್ಯ-ಭಕ್ತರೆಲ್ಲರೂ ಮಾನವೀಯತೆ ಮೆರೆಯಬೇಕೆಂದು ಕರೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next