Advertisement

ರಘುಗೆ ಕ್ಷೇತ್ರಾಭಿವೃದ್ಧಿಯ ಶ್ರೀರಕ್ಷೆ

03:46 PM Apr 24, 2018 | Team Udayavani |

ಬೆಂಗಳೂರು: ಸರ್‌.ಸಿ.ವಿ.ರಾಮನ್‌ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್‌.ರಘು ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಅಪಾರ ಬೆಂಬಲಿಗರೊಡನೆ ಪಾದಯಾತ್ರೆ ನಡೆಸಿದ ಅವರು ಚುನಾವಣಾಧಿಕಾರಿಗಳಿಗೆ  ಉಮೇದುವಾರಿಕೆ ಸಲ್ಲಿಸಿದರು.

Advertisement

ಪಾದಯಾತ್ರೆ ಹಾಗೂ ರೋಡ್‌ ಶೋ ವೇಳೆ ಕ್ಷೇತ್ರದ ಮಹಿಳೆಯರು ಆರತಿ ಎತ್ತಿ ಶುಭಕೋರಿದರು. ನಾಮಪತ್ರ ಸಲ್ಲಿಕೆ ನಂತರ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್‌ಗಳಲ್ಲಿ ಮತಯಾಚಿಸಿದರು. ಹತ್ತು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ತಿಳಿಸಿದ ಆವರು ಮತ್ತೂಮ್ಮೆ ಆಶೀರ್ವಾದ ಮಾಡುವಂತೆ ಕೋರಿದರು.

ಈ ವೇಳೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಜನತೆಯ ನಿರೀಕ್ಷೆಗಳನ್ನು ಹತ್ತು ವರ್ಷಗಳಲ್ಲಿ  ಈಡೇರಿಸಿದ್ದೇನೆ. ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ. ಕ್ಷೇತ್ರದಲ್ಲಿ ನಿರಂತರ ಸಂಪರ್ಕ ಸಾಧಿಸಿ ಜನತೆಯ ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂದು ಹೇಳಿದರು.

ಕ್ಷೇತ್ರದಲ್ಲಿ ನಾನು ಮಾಡಿರುವ ಕಾರ್ಯಗಳೇ ನನಗೆ ಶ್ರೀರಕ್ಷೆ. ನಮ್ಮ ಸರ್ಕಾರ ಇಲ್ಲದಿದ್ದರೂ ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೂ ಸೇರಿ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ. ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next