Advertisement

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

11:24 AM Jun 03, 2024 | Team Udayavani |

ಉಡುಪಿ: ಖಾಸಗಿ ಸುದ್ದಿ ಮಾಧ್ಯಮದ ಹೆಸರು ಬಳಸಿ ರಘುಪತಿ ಭಟ್‌ ವಿಧಾನ ಪರಿಷತ್‌ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್‌ ನ್ಯೂಸ್‌ ಸುಳ್ಳು ಸುದ್ದಿಯ ವೀಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ. ರಘುಪತಿ ಭಟ್‌ ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

Advertisement

ನನಗೆ ಕ್ಷೇತ್ರದಾದ್ಯಂತ ಅಪಾರ ಬೆಂಬಲ ವ್ಯಕ್ತವಾಗಿರುವುದರಿಂದ ಚುನಾವಣೆಯ ಮುಂಚಿನ ದಿನ ರಾತ್ರಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಬ್ರೇಕಿಂಗ್‌ ನ್ಯೂಸ್‌ ಎಂಬಂತೆ ಬಿಂಬಿಸಿ ನಾನು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಸುಳ್ಳು ಮಾಹಿತಿಯಿಂದಾಗಿ ಮತದಾರರು ಗೊಂದಲಕ್ಕೀಡಾಗಿದ್ದಾರೆ. ಸುಳ್ಳು ಮಾಹಿತಿ ಬಿತ್ತರಿಸಿದವರನ್ನು ಪತ್ತೆ ಮಾಡಿ ತತ್‌ಕ್ಷಣ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next