Advertisement

Udupi: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ…: ರಘುಪತಿ ಭಟ್

07:30 AM Jun 09, 2024 | Team Udayavani |

ಉಡುಪಿ: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ. ಈ ಮಟ್ಟಿನ ಸೋಲು ನಿರೀಕ್ಷೆ ಮಾಡಿರಲಿಲ್ಲ. ಸೋಲಿನಿಂದ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ರಾಜಕೀಯ, ಸಾಮಾಜಿಕ ಕಾರ್ಯಕರ್ತನಾಗಿ ಸಮಾಜದೊಂದಿಗೆ ಇರುತ್ತೇನೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.

Advertisement

ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ರಘುಪತಿ ಭಟ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲ ಬೂತ್ ಗಳಲ್ಲೂ ಕಾರ್ಯಕರ್ತರು ನಮ್ಮ ಜತೆಗೆ ಇದ್ದರು. ಪಕ್ಷದ ತಪ್ಪು ನಿರ್ಣಯ ಪ್ರತಿಭಟಿಸಿ ಸ್ಪರ್ಧೆ ಮಾಡಿದ್ದೇನೆ. ಮುಂದೆಯೂ ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿದ್ದೇನೆ. ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ಹೇಳಿದರು.

ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕೆ. ರಘುಪತಿ ಭಟ್ 7039 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನು ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next