Advertisement
ಕೆನರಾ ಬ್ಯಾಂಕ್ ಜಿಲ್ಲಾ ಲೀಡ್ ಬ್ಯಾಂಕ್ ಕಚೇರಿ ಜಿಲ್ಲೆಯ ವಿವಿಧ ಬ್ಯಾಂಕ್ಗಳ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರದ ವಿತ್ತೀಯ ವಿಭಾಗದ ಮಾರ್ಗದರ್ಶನದಲ್ಲಿ ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ಬೃಹತ್ ಸಾಲ ಸಂಪರ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಇದನ್ನೂ ಓದಿ : ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ
ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಕಚೇರಿಯ ಮಹಾಪ್ರಬಂಧಕ ರಾಮ ನಾಯ್ಕ ವಹಿಸಿದ್ದರು. ವಿವಿಧ ಬ್ಯಾಂಕುಗಳ ಪ್ರಾದೇಶಿಕ ಮುಖ್ಯಸ್ಥರಾದ ಕೆನರಾ ಬ್ಯಾಂಕ್ನ ಲೀನಾ ಪಿಂಟೋ, ಬ್ಯಾಂಕ್ ಆಫ್ ಬರೋಡಾದ ರವಿ ಎಚ್.ಜಿ., ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಡಾ|ವಾಸಪ್ಪ ಎಚ್.ಟಿ., ಭಾರತೀಯ ಸ್ಟೇಟ್ ಬ್ಯಾಂಕ್ನ ತರುಣ್ ಪಾಯಿದೆ, ಕರ್ಣಾಟಕ ಬ್ಯಾಂಕ್ನ ರಾಜಗೋಪಾಲ್, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ನ ಸೂರ್ಯನಾರಾಯಣ ಉಪಸ್ಥಿತರಿದ್ದರು. ನಬಾರ್ಡ್ ಜಿಲ್ಲಾ ಅಭಿವೃದ್ಧಿ ಪ್ರಬಂಧಕಿ ಸಂಗೀತಾ ಕರ್ತ ಅವರು ಸಿದ್ಧಪಡಿಸಿದ ನಬಾರ್ಡ್ ಸಾಲ ಯೋಜನೆಯನ್ನು ಭಟ್ ಬಿಡುಗಡೆಗೊಳಿಸಿದರು. ಜಿಲ್ಲಾ ಅಗ್ರಣಿ ಬ್ಯಾಂಕ್ ಪ್ರಬಂಧಕ ಪಿ.ಎಂ.ಪಿಂಜಾರ್ ಸ್ವಾಗತಿಸಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ 2ರ ಮುಖ್ಯಸ್ಥ ಕಾಳಿ ಕೆ. ವಂದಿಸಿದರು. ಕೆನರಾ ಬ್ಯಾಂಕ್ ಆರ್ಸೆಟಿ ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮ ನಿರ್ವಹಿಸಿದರು.