Advertisement

ಚಿದಂಬರಂ ಭೇಟಿಯಾದ ರಾಹುಲ್‌, ಪ್ರಿಯಾಂಕಾ

09:53 AM Nov 28, 2019 | Team Udayavani |

ಹೊಸದಿಲ್ಲಿ: ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಕಾಂಗ್ರೆಸ್‌ ಯುವ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Advertisement

ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕನನ್ನು ಆಗಸ್ಟ್‌ 21ರಂದು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಅಕ್ಟೋಬರ್‌ 22ರಂದು ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದರೆ ಮನಿ ಲಾಂಡರಿಂಗ್‌ ಪ್ರಕರಣವೊಂದರಲ್ಲಿ ಅವರನ್ನು ಅಕ್ಟೋಬರ್‌ 16ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿ, ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯದ ಆದೇಶದ ಮೇರೆಗೆ ನವೆಂಬರ್‌ 27ರ ವರೆಗೆ ನ್ಯಾಯಾಂಗ ಬಂಧನ ನೀಡಲಾಗಿತ್ತು.

ಬಂಧನ ಅವಧಿ ವಿಸ್ತರಣೆ

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿ ಇರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್‌ 11 ವಿಸ್ತರಿಸಿ ದೆಹಲಿ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.

ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯದ ನಾ| ಅಜಯ್‌ ಕುಮಾರ್‌ ಕುಹಾರ್‌ ಅವರು ಈ ಆದೇಶ ನೀಡಿದ್ದಾರೆ. ಬಂಧನ ಅವಧಿಯನ್ನು ವಿಸ್ತರಿಸಲು ಇಡಿ ಮಾಡಿದ್ದ ಮನವಿಗೆ ಚಿದಂಬರಂ ಅವರ ವಕೀಲರು ಯಾವುದೇ ವಿರೋಧ ವ್ಯಕ್ತಪಡಿಸಲಿಲ್ಲ.

Advertisement

ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಇ.ಡಿ. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ.

ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬುಧವಾರ ಚಿದಂಬರ ಅವರನ್ನು ಭೇಟಿಯಾಗಿ ಕುಶಲೋಪರಿ ನಡೆಸಿದ್ದರು. ಹಿರಿಯ ಮುಖಂಡರಾದ ಶಶಿ ತರೂರ್‌ ಮತ್ತು ಮನೀಶ್‌ ತಿವಾರಿ ಅವರು ಸೋಮವಾರ ಚಿದಂಬರಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next