Advertisement
ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಕೊಟ್ಟಂತ ಗರಿಬೀ ಹಠವೋ, ಉಳುವವನೇ ಭೂ ಒಡೆಯ ಕಾನೂನು ಜಾರಿಗೆ ತರುವ ಮೂಲಕ ಬಡವರಿಗೆ ಭೂಮಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಕೊಟ್ಟಿದ್ದರು. ಒಮ್ಮೆ ಇಂದಿರಾ ಗಾಂಧಿ ಮಾಗಡಿಗೂ ಆಗಮಿಸಿದ್ದರು. ಅವರ ಕುಡಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ವಾರದಿಂದಲೂ ರಾಜ್ಯದಲ್ಲಿ ಮಿಂಚಿನ ಜನಾಶೀರ್ವಾದ ಯಾತ್ರೆ ನಡೆಸುವ ಮೂಲಕ ಯುವಶಕ್ತಿಗೆ ಹೆಚ್ಚಿನ ಶಕ್ತಿ ತುಂಬಿದ್ದಾರೆ ಎಂದರು.
Related Articles
Advertisement
ಮಂಚನಬೆಲೆ ಜಲಾಶಯದಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸೇರಿದಂತೆ ಅನೇಕ ಜನಪರವಾದ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಮನ್ನಣೆ ಗಳಿಸಿದ್ದೇನೆ. ಆದ್ದರಿಂದಲೇ ಜನ ತನ್ನನ್ನು ನಾಲ್ಕು ಬಾರಿ ಶಾಸಕನನ್ನಾಗಿ ಮಾಡಿದ್ದಾರೆ. ಐದನೇ ಬಾರಿಯೂ ತನ್ನನ್ನು ಕಾಂಗ್ರೆಸ್ ಪಕ್ಷದಿಂದ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಎಚ್.ಸಿ.ಬಾಲಕೃಷ್ಣ ವ್ಯಕ್ತಪಡಿಸಿದರು.
ಹಾರ ತುರಾಯಿ ಸ್ವಾಗತ: ವಾರ್ಡ್ಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಭೇಟಿ ನೀಡುತ್ತಿದ್ದಂತೆ ಅಲ್ಲಲ್ಲಿ ಪಟಾಕಿ ಸಿಡಿಸಿ, ಹಾರ ಹಾಕಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವುದು ಮಜ್ಜಿಗೆ, ಪಾನಕ ಜೂಸ್ ವಿತರಿಸುವುದು ಸರ್ವೇ ಸಾಮಾನ್ಯವಾಗಿತ್ತು.
ವಿಎಸ್ಎಸ್ಎನ್ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ, ಪುರಸಭಾ ಮಾಜಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ನಾಗೇಂದ್ರ, ಸದಸ್ಯರಾದ ಮಂಡಿ ಗುರುಸ್ವಾಮಿ, ಪ್ರವೀಣ್, ರಿಯಾಜ್, ಮೂರ್ತಿ, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಎಂ.ಅರ್.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಎಸ್.ಕಾಂತರಾಜು, ಎಲ್.ನಂಜಯ್ಯ, ಕುಮಾರ್, ರಂಗನಾಥ್, ಶಿವರಾಜು, ಜಯರಾಂ, ವೆಂಟಕೇಶ್, ನಾಗೇಶ್, ರಾಜು, ವಿಜಯಕುಮಾರ್ ಇತರರು ಇದ್ದರು.
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಇಲ್ಲಿನ ಮತದಾರರು ಕಂಕಣ ಬದ್ಧರಾಗಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ. ತಾನು 20 ವರ್ಷಗಳ ಕಾಲ ಶಾಸಕನಾಗಿದ್ದುಕೊಂಡು ಜನರ ಆಶೋತ್ತರಗಳನ್ನು ಈಡೇರಿಸಿದ್ದೇನೆ -ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ.