Advertisement

ಇಂದು ರಾಹುಲ್‌, BSY ,CM ಕಲಬುರಗಿ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ

11:03 PM Apr 27, 2023 | Team Udayavani |

ಕಲಬುರಗಿ: ಜಿಲ್ಲೆಯಲ್ಲಿ ಚುನಾವಣೆ ಕಾವು ತೀವ್ರಗೊಂಡಿದೆ. ಏ.28ರಂದು ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಇತರ ಘಟಾನುಘಟಿಗಳು ಆಗಮಿಸಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಏ.28ರಂದು ಕಲಬುರಗಿಗೆ ಆಗಮಿಸುವ ರಾಹುಲ್‌ ಗಾಂಧಿ ಜೇವರ್ಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ|ಅಜಯಸಿಂಗ್‌ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

Advertisement

ಮಾಜಿ ಸಿಎಂ ಬಿಎಸ್‌ವೈ ಸಹ ಏ.28ರಂದು ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಪರ ಕಮಲಾಪುರದಲ್ಲಿ ಪ್ರಚಾರ ಮಾಡಲಿದ್ದಾರೆ. ಬಳಿಕ ಅಫ‌ಜಲಪುರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಮತಯಾಚಿಸಲಿದ್ದಾರೆ. ನಂತರ ಜೇವರ್ಗಿ ಮತಕ್ಷೇತ್ರದ ಯಡ್ರಾಮಿ ಪಟ್ಟಣಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಶಿವರಾಜ ಪಾಟೀಲ ರದ್ದೇವಾಡಗಿ ಪರ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಆಳಂದ ಕ್ಷೇತ್ರಕ್ಕೆ ತೆರಳಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೇಡಂ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ಪಕ್ಷದ ಅಭ್ಯರ್ಥಿ ರಾಜಕುಮಾರ ಪಾಟೀಲ ತೇಲ್ಕೂರ ಪರ ಪ್ರಚಾರ ನಡೆಸಲಿದ್ದಾರೆ. ತದನಂತರ ಚಿತ್ತಾಪುರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೊಡ ಪರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next