Advertisement

ರಾಹುಲ್‌ ಗಾಂಧಿಯಿಂದಲೇ ಕಾಂಗ್ರೆಸ್‌ ಸರ್ವನಾಶ: ಶೆಟ್ಟರ್‌

10:04 AM Dec 16, 2019 | sudhir |

ಜಮಖಂಡಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಪ್ರಬುದ್ಧತೆಯಿಲ್ಲ. ಅವರಿಗೆ ಯಾವ ವಿಷಯ ಹೇಳಬೇಕೆಂಬ ಪರಿಜ್ಞಾನ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏನನ್ನೂ ಆರಿಯದೇ ಮಾತಾಡುವ ರಾಜಕಾರಣಿ ರಾಹುಲ್‌ ಗಾಂಧಿ ಬಚ್ಚಾ. ಅವರಿಂದಲೇ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ. ಅವರಿಂದಲೇ ಕಾಂಗ್ರೆಸ್‌ ಸರ್ವನಾಶ ಆಗಲಿದೆ.

“ರೇಪ್‌ ಇನ್‌ ಇಂಡಿಯಾ’ ಹೇಳಿಕೆ ದೇಶಕ್ಕೆ ಮಾಡಿದ ಅಪಮಾನ. ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು. ವೀರ ಸಾರ್ವಕರ್‌ ಬಗ್ಗೆ ಮಾತನಾಡುವ ಹಕ್ಕು ಅವರಿಗಿಲ್ಲ. ವೀರ ಸಾರ್ವಕರ್‌ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದು ದೇಶಕ್ಕೆ ಗೊತ್ತಿದೆ ಎಂದರು.

ಅಧಿಕಾರ ದಾಹಕ್ಕೆ ಕಾಂಗ್ರೆಸ್‌-ಎನ್‌ಸಿಪಿ ಜತೆ ಕೈಜೋಡಿಸಿದ ಶಿವಸೇನೆ ನಡೆ ನಾಚಿಕೆಗೇಡಿತನ. ಬೆಳಗಾವಿ ಗಡಿ ಸಮಸ್ಯೆ, ಜಾತಿ ಸಮಸ್ಯೆ ಬಗ್ಗೆ ವಿನಾಕಾರಣ ಕ್ಯಾತೆ ತೆಗೆದಿರುವುದರ ಶಿವಸೇನೆ ಬಗ್ಗೆ ಕಾಂಗ್ರೆಸ್‌ ತನ್ನ ನಿಲುವನ್ನು ಸ್ಪಷ್ಟ ಪಡಿಸಬೇಕು ಎಂದವರು ಆಗ್ರಹಿಸಿದರು.

ಹೈಕಮಾಂಡ್‌ ಜತೆ ಚರ್ಚಿಸಿ ಶೀಘ್ರ ಸಚಿವ ಸಂಪುಟ ರಚನೆ ನಡೆಯಲಿದೆ. ಡಿಸಿಎಂ ಸ್ಥಾನವನ್ನು ಹೆಚ್ಚಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಸರಕಾರ ತನ್ನು ಅವಧಿಯನ್ನು ಪೂರೈಸಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next