Advertisement

ರಾಹುಲ್‌ ಗಾಂಧಿ ಇಡಿ ವಿಚಾರಣೆ: ಮಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

11:39 AM Jun 17, 2022 | Team Udayavani |

ಮಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್‌ನ ಎಸ್‌ಎಲ್‌ ಮಥಾಯಿಸ್‌ ಪಾರ್ಕ್‌ನಿಂದ ಅತ್ತಾವರದ ಇಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Advertisement

ಮಾಜಿ ಸಚಿವ ರಮಾನಾಥ್ ರೈ, ಐವಾನ್ ಡಿಸೋಜಾ, ಹರೀಶ್‌ ಕುಮಾರ್‌ ಮುಂತಾದ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:ಜಿ.ಎಸ್.ಟಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತ ಕೇಂದ್ರ ಸರ್ಕಾರ  ವಿರುದ್ಧ ಘೊಷಣೆ ಕೂಗಿ, ಇಡಿ ಕಚೇರಿಗೆ ನುಗ್ಗಲು ಯತ್ನಿಸಿದರು.  ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು, ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next