Advertisement

Manipur;ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭೇಟಿ

10:05 AM Jun 29, 2023 | Team Udayavani |

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂ. 29 ರಿಂದ 2 ದಿನಗಳ ಕಾಲ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೆಹಲಿಯ ತಮ್ಮ ನಿವಾಸದಿಂದ ಪ್ರಯಾಣ ಬೆಳೆಸಿದ್ದಾರೆ.

Advertisement

ರಾಹುಲ್ ಗಾಂಧಿ ಅವರು ಇಂಫಾಲ್ ಮತ್ತು ಚುರಾಚಂದ್‌ಪುರದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದ ಜನರನ್ನು ಭೇಟಿ ಮಾಡಿ, ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರದಲ್ಲಿ ಇದುವರೆಗೆ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 3,000 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಹಿಂಸಾಚಾರ ಪೀಡಿತ ಸ್ಥಳಗಳಿಂದ ಬೇರೆಡೆ ತೆರಳಿ ಆಶ್ರಯ ಪಡೆದಿದ್ದಾರೆ.


ಮೇ 3 ರಂದು ಹಿಂಸಾಚಾರ ನಡೆದ ನಂತರ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next