Advertisement

Padma Shri ಪ್ರಶಸ್ತಿಯನ್ನು ಹಿಂದಿರುಗಿಸಿದ್ದ ಬಜರಂಗ್‌ ಭೇಟಿ ಮಾಡಿದ ರಾಹುಲ್‌ ಗಾಂಧಿ

11:30 PM Dec 27, 2023 | Team Udayavani |

ಹೊಸದಿಲ್ಲಿ: ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಆಪ್ತ ಸಂಜಯ್‌ ಸಿಂಗ್‌ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಬಜರಂಗ್‌ ಪೂನಿಯ ಅವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಬುಧವಾರ ಭೇಟಿ ಮಾಡಿದರು.

Advertisement

ಮಹಿಳಾ ಕುಸ್ತಿಪಟುಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಬಜರಂಗ್‌ ಪೂನಿಯ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್‌ ಗಾಂಧಿ ಅವರು ಕುಸ್ತಿಪಟುಗಳು ತಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ಬೀದಿಗೆ ಇಳಿದರೆ ಕುಸ್ತಿಸ್ಪರ್ಧೆಯನ್ನು ಬಿಡಬೇಕಾಗುತ್ತದೆ. ಹೀಗೆ ಆದರೆ ಪೋಷಕರು ಇನ್ನೂ ತಮ್ಮ ಮಕ್ಕಳನ್ನು ಕುಸ್ತಿ ಸ್ಪರ್ಧೆಗೆ ಕಳುಹಿಸುತ್ತಾರೆಯೇ ಎಂದವರು ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next