Advertisement

ಕಳಂಕಿತ ವ್ಯಕ್ತಿಗೆ ಸಿಎಂ ಪಟ್ಟ, ರಾಹುಲ್ ರಾಜೀನಾಮೆಗೆ ಬಿಜೆಪಿ ಪಟ್ಟು

02:39 PM Dec 17, 2018 | Sharanya Alva |

ಬೆಂಗಳೂರು:1984ರಲ್ಲಿ ನಡೆದ ಸಿಖ್ ಗಲಭೆಯಲ್ಲಿ ಶಾಮೀಲಾಗಿರುವ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಸೋಮವಾರ ಆಗ್ರಹಿಸಿದೆ.

Advertisement

ಸಿಖ್ ಗಲಭೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನಂತರ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಗಲಭೆಗೆ ಸಂಬಂಧಿಸಿದಂತೆ ನಾನಾವತಿ ಆಯೋಗ ನೀಡಿರುವ ವರದಿಯಲ್ಲಿ ಕಮಲ್ ನಾಥ್ ಅವರ ಹೆಸರು ಇದೆ ಎಂದು ಅವರು ಆರೋಪಿಸಿದರು. ಇದೀಗ ಸಿಖ್ ಗಲಭೆಯಲ್ಲಿ ಭಾಗಿಯಾಗಿರುವ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ದೂರಿದರು.

ಸಿಖ್ ಗಲಭೆಯಲ್ಲಿ ಸಿಖ್ ಸಮುದಾಯ ಯಾರನ್ನು ಆರೋಪಿ ಎಂದು ಪರಿಗಣಿಸಿತ್ತೋ ಅಂತಹ ಮತ್ತೊಬ್ಬ ವ್ಯಕ್ತಿಯನ್ನೇ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ನಿಜಕ್ಕೂ ದುರಂತ ಎಂದು ಸೋಮವಾರ ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಕಮಲ್ ನಾಥ್ ಅವರ ಹೆಸರನ್ನು ಉಲ್ಲೇಖಿಸದೆ ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next