Advertisement

ಚೌಕೀದಾರ್ ಚೋರ್ ಹೈ; ರಾಹುಲ್ ಆರೋಪದ ಬಗ್ಗೆ ಸುಪ್ರೀಂ ತೀರ್ಪಿನಲ್ಲಿ ಕೊಟ್ಟ ಎಚ್ಚರಿಕೆ ಏನು?

09:48 AM Nov 15, 2019 | Nagendra Trasi |

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಚೌಕೀದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂಬ ಕಾಂಗ್ರೆಸ್ ಹಿಂದಿನ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪದ ಕುರಿತು ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಾಹುಲ್ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದು, ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟಿರುವುದಾಗಿ ಸುಪ್ರೀಂಕೋರ್ಟ್ ಗುರುವಾರ ತೀರ್ಪು ನೀಡಿದೆ.

Advertisement

ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ತ್ರಿಸದಸ್ಯ ಪೀಠ, ಚೌಕೀದಾರ್ ಚೋರ್ ಹೈ ಎಂಬ ಹೇಳಿಕೆ ಕುರಿತು ರಾಹುಲ್ ಗಾಂಧಿ ಸಲ್ಲಿಸಿದ್ದ ಕ್ಷಮೆಯಾಚನೆ ಅಫಿಡವಿತ್ ಅನ್ನು ಸ್ವೀಕರಿಸಿದ್ದು, ಇನ್ಮುಂದೆ ಹೇಳಿಕೆ ನೀಡುವಾಗ ಜಾಗರೂಕತೆಯಿಂದ ಇರಬೇಕು ಎಂದು ಎಚ್ಚರಿಕೆ ನೀಡಿ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಕೈಬಿಟ್ಟಿದೆ.

ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಚೌಕೀದಾರ್ ಚೋರ್ ಹೈ ಎಂಬ ತನ್ನ ಹೇಳಿಕೆಯನ್ನು ಸುಪ್ರೀಂಕೋರ್ಟ್ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಈ ಬಗ್ಗೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ದಾವೆ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ತ್ರಿಸದಸ್ಯ ಪೀಠ, ಈ ಬಗ್ಗೆ ಒಂದೋ ಕ್ಷಮೆ ಕೇಳಿ, ಇಲ್ಲವೇ ವಿಚಾರಣೆ ಎದುರಿಸಿ ಎಂದು ರಾಹುಲ್ ಗಾಂಧಿಗೆ ಸೂಚಿಸಿತ್ತು. ಬಳಿಕ ರಾಹುಲ್ ಗಾಂಧಿ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು. ಅಲ್ಲದೇ ಸುಪ್ರೀಂಕೋರ್ಟ್ ಗೂ ಅಫಿಡವಿತ್ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next