Advertisement

ದೇಶದಲ್ಲಿ ನಾಗರಿಕರು,ಭದ್ರತಾ ಸಿಬ್ಬಂದಿಗಳು ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ

03:05 PM Dec 05, 2021 | Team Udayavani |

ನವದೆಹಲಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಬಂಡುಕೋರರ ವಿರೋಧಿ ಕಾರ್ಯಾಚರಣೆಯಲ್ಲಿ ನಡೆದ ನಾಗರಿಕರ ಹತ್ಯೆಯ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಇದು ಹೃದಯ ವಿದ್ರಾವಕವಾಗಿದೆ.ನಮ್ಮ ದೇಶದಲ್ಲಿ ನಾಗರಿಕರಾಗಲಿ ಅಥವಾ ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ.ಗೃಹ ಸಚಿವಾಲಯ ಏನು ಮಾಡುತ್ತಿದೆ ಎಂಬುದಕ್ಕೆ ಸರ್ಕಾರ “ನಿಜವಾದ ಉತ್ತರ” ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.

ಭದ್ರತಾ ಪಡೆಗಳಿಂದ ಕನಿಷ್ಠ 11 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯು “ತಪ್ಪಾದ ಗುರುತಿಸುವಿಕೆಯಿಂದ ” ನಡೆದಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ನಾಗಾಲ್ಯಾಂಡ್‌ನ ರಾಜಧಾನಿ ಕೊಹಿಮಾದ ಪೊಲೀಸರು ಹೇಳಿದ್ದಾರೆ.

ಉನ್ನತ ಮಟ್ಟದ ಎಸ್‌ಐಟಿ ತಂಡ ಘಟನೆಯ ಕೂಲಂಕಷವಾಗಿ ತನಿಖೆ ನಡೆಸಿ, ದುಃಖತಪ್ತ ಕುಟುಂಬಗಳಿಗೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next