Advertisement

Jannayak : ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಗೆ ಸಹಾಯಕ್ಕೆ ಧಾವಿಸಿದ ರಾಹುಲ್ ; ವಿಡಿಯೋ

04:57 PM Aug 09, 2023 | Team Udayavani |

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದರಾಗಿ ಪುನರಾಗಮನದ ಬಳಿಕ ಲೋಕಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಿಡಿ ಕಾರಿದ್ದಾರೆ. ಇದಕ್ಕೂ ಮುನ್ನ ಸಂಸತ್ತಿನ ಸಂಕೀರ್ಣವನ್ನು ಪ್ರವೇಶಿಸುವ ಮೊದಲೇ ಸಾಮಾಜಿಕ ಮಾಧ್ಯಮದಲ್ಲಿ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.

Advertisement

ಸಂಸತ್ತಿಗೆ ತೆರಳುತ್ತಿದ್ದಾಗ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿ ಇಳಿದು ನೆರವಿಗೆ ಧಾವಿಸಿ ಬಂದಿದ್ದಾರೆ. ಸವಾರನ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಘಟನೆಯ ವಿಡಿಯೋವನ್ನು “ಜನನಾಯಕ್ (ಜನರ ಹೀರೋ)” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.

ಇದನ್ನೂ ಓದಿ: Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next