Advertisement

ಡಿ.5ಕ್ಕೆ ರಾಹುಲ್‌ಗೆ ಪಟ್ಟ?ಆಂತರಿಕ ಚುನಾವಣೆಗೆ ದಿನಾಂಕ ನಿಗದಿ

06:00 AM Nov 21, 2017 | Team Udayavani |

ಹೊಸದಿಲ್ಲಿ: ಎಲ್ಲವೂ ಅಂದು ಕೊಂಡಂತೆಯೇ ನಡೆದರೆ ಡಿ.5ರ ಹೊತ್ತಿಗೆ ಕಾಂಗ್ರೆಸ್‌ನಲ್ಲಿನ ಅಧಿಕಾರದ “ಕೈ’ ಬದಲಾಗಲಿದೆ. ಹಾಲಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಸ್ಥಾನಕ್ಕೆ, ಪುತ್ರ ರಾಹುಲ್‌ಗಾಂಧಿ ಆಯ್ಕೆ ಯಾಗುವ ಎಲ್ಲ ಸಾಧ್ಯತೆಗಳಿವೆ. ಇದರ ಜತೆಗೆ 2019ರ ಲೋಕಸಭೆ ಚುನಾವಣೆಯಲ್ಲೂ ರಾಹುಲ್‌ ಗಾಂಧಿಯವರೇ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿಯೂ ಬಿಂಬಿತವಾಗಲಿದ್ದಾರೆ.

Advertisement

ಸೋಮವಾರ ಇಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಂತರಿಕ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಾಗಿದೆ. ಡಿ.19ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿ ಸುವ ಬಗ್ಗೆ ನಿರ್ಧರಿಸಲಾಗಿದೆ. ಡಿ.1ರಿಂದ ಡಿ.4ರ ವರೆಗೆ ನಾಮಪತ್ರ ಸಲ್ಲಿಸಬೇಕಿದೆ. ಅಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರದ ಪರಿಶೀಲನೆ ನಡೆಯಲಿದ್ದು, 3.30ಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ರಾಹುಲ್‌ ಒಬ್ಬರೇ ಉಮೇದುವಾರಿಕೆ ಸಲ್ಲಿಸಿ ದರೆ, ಮುಂದಿನ ಚುನಾವಣಾ ಪ್ರಕ್ರಿಯೆ ನಡೆಯುವುದಿಲ್ಲ. ಅಂದೇ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರು ಯಾರು ಎಂಬುದು ನಿಗದಿ ಯಾಗಲಿದೆ. ಗುಜರಾತ್‌ ಚುನಾವಣೆಗಿಂತಲೂ ಮೊದಲೇ ಹೊಸ ಅಧ್ಯಕ್ಷ ಸಿಗಲಿದ್ದಾರೆ.

ಪಕ್ಷದ ಉನ್ನತ ಮೂಲಗಳ ಪ್ರಕಾರ, 47 ವರ್ಷದ ರಾಹುಲ್‌ ಗಾಂಧಿಯೊಬ್ಬರೇ ನಾಮ ಪತ್ರ ಸಲ್ಲಿಸಲಿದ್ದಾರೆ. ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಬೇರೊಬ್ಬರು ನಾಮಪತ್ರ ಸಲ್ಲಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿದರೆ, ಡಿ.16 ರಂದು ಆಂತರಿಕ ಚುನಾವಣೆ ನಡೆಯಲಿದೆ. ಈ ಚುನಾವಣೆಗಾಗಿ ಡಿ.11 ನಾಮಪತ್ರ ವಾಪಸ್‌ ತೆಗೆದುಕೊಳ್ಳುವ ದಿನವಾಗಲಿದೆ. ಡಿ.19 ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಒಮ್ಮೆ ಅಧ್ಯಕ್ಷರು ನೇಮಕವಾದೊಡನೆ ಹೊಸದಾಗಿ ಕಾರ್ಯಕಾರಿ ಸಮಿತಿ ರಚನೆಯಾಗಲಿದೆ. ಆಗ ಅಧ್ಯಕ್ಷರಾಗಲಿರುವವರೇ ಉಪಾಧ್ಯ ಕ್ಷರು ಸೇರಿ ಉಳಿದ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.
ಸಭೆಯ ಅನಂತರ ಮಾತನಾಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲ ಅವರು, ಮುಂದೆಯೂ ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಕಾಂಗ್ರೆಸ್‌ಗೆ ಸಿಗಲಿದೆ ಎಂದಿದ್ದಾರೆ. ಸೋನಿಯಾ ಅವರ ಮುಂದಿನ ಹೊಣೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಒಮ್ಮೆ ಚುನಾವಣಾ ಪ್ರಕ್ರಿಯೆ ಮುಗಿಯಲಿ. ಬಳಿಕ ಆ ಬಗ್ಗೆ ಹೇಳಲು ನಾನು ಖುಷಿ ಪಡುತ್ತೇನೆ ಎಂದರು.

ರಾಹುಲ್‌ಗೆ ಪ್ರತಿಷ್ಠೆಯ ಪ್ರಶ್ನೆ
ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫ‌ಲಿತಾಂಶ ಡಿ.18 ರಂದು ಪ್ರಕಟವಾಗಲಿದೆ. ಮಾರನೇ ದಿನವೇ ರಾಹುಲ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿಯಲಿದ್ದಾರೆ. ಹೀಗಾಗಿ ಈ ಎರಡೂ ರಾಜ್ಯಗಳಲ್ಲಿ ಗೆಲ್ಲುವ ಒತ್ತಡ ರಾಹುಲ್‌ ಮೇಲೆ ಇದೆ. ಗುಜರಾತ್‌ನಲ್ಲಿ 22 ವರ್ಷಗಳಿಂದ ಬಿಜೆಪಿಯೇ ಅಧಿಕಾರ ನಡೆಸುತ್ತಿದ್ದು, ಈ ಬಾರಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್‌ ನಾನಾ ತಂತ್ರಗಳಿಗೆ ಮೊರೆ ಹೋಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನದ್ದೇ ಅಧಿಕಾರವಿದ್ದು, ಇಲ್ಲಿ ಉಳಿಸಿಕೊಳ್ಳುವ ಜರೂರತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next