Advertisement

Azadpur ಮಂಡಿಗೆ ಭೇಟಿ ನೀಡಿ ತರಕಾರಿ- ಹಣ್ಣು ಖರೀದಿಸಿದ ರಾಹುಲ್ ಗಾಂಧಿ

12:53 PM Aug 01, 2023 | Team Udayavani |

ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರೊಂದಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೀಗ ತರಕಾರಿ ಮಾರುಕಟ್ಟೆಗೆ ಹೋಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಅಜಾದ್ ಪುರ ಮಂಡಿಗೆ ಹೋಗಿದ್ದ ರಾಹುಲ್, ಅಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸಿದರು.

Advertisement

ರಾಹುಲ್ ಗಾಂಧಿ ಅವರು ಮಾರುಕಟ್ಟೆಯಲ್ಲಿ ತರಕಾರಿ ಬೆಲೆಗಳ ಬಗ್ಗೆ ವಿಚಾರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ದೆಹಲಿಯ ಆಜಾದ್‌ ಪುರ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಗಾರರೊಬ್ಬರು ಕಣ್ಣೀರು ಹಾಕುವ ವಿಡಿಯೋವನ್ನು ಕಳೆದ ಶನಿವಾರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು.

ವಿಡಿಯೋದಲ್ಲಿ ತರಕಾರಿ ವ್ಯಾಪಾರಿ ರಾಮೇಶ್ವರ್ ಎಂಬವರು, “ಟೊಮ್ಯಾಟೊ ತುಂಬಾ ದುಬಾರಿಯಾಗಿದೆ, ಅದನ್ನು ಖರೀದಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ” ಎಂದು ಕಣ್ಣಿರು ಹಾಕಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next