Advertisement

ವೈಷ್ಣೋದೇವಿಗೆ 14 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಿದ ರಾಹುಲ್‌!

09:57 PM Sep 09, 2021 | Team Udayavani |

ಜಮ್ಮು:ತಮ್ಮ ಎರಡು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸವನ್ನು ಗುರುವಾರ ಆರಂಭಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕಾತ್ರಾ ದಿಂದ 14 ಕಿ.ಮೀ. ದೂರದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಕಾಲ್ನಡಿಗೆಯಲ್ಲೇ ಸಾಗಿದ್ದಾರೆ.

Advertisement

ಈ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್‌, “ನಾನಿಲ್ಲಿ ಮಾತೆಗೆ ಪೂಜೆ ಸಲ್ಲಿಸಲು ಬಂದಿದ್ದೇನೆ. ಇಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ’ ಎಂದಷ್ಟೇ ಹೇಳಿ ಮುಂದೆ ಸಾಗಿದ್ದಾರೆ. ಭದ್ರತಾ ಸಿಬ್ಬಂದಿ, ಕಾಂಗ್ರೆಸ್‌ ಕಾರ್ಯಕರ್ತರು ಕೂಡ ರಾಹುಲ್‌ ಕಾಲ್ನಡಿಗೆಗೆ ಸಾಥ್‌ ನೀಡಿದ್ದಾರೆ. ದಾರಿ ಮಧ್ಯೆ ಸಿಗುತ್ತಿದ್ದ ಯಾತ್ರಾರ್ಥಿಗಳೊಂದಿಗೂ ರಾಹುಲ್‌ ಸಂವಾದ ನಡೆಸಿದ್ದಾರೆ.
ಜಮ್ಮು ಭೇಟಿಯ ಬಳಿಕ ರಾಹುಲ್‌ ಲಡಾಖ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ನಿಂತಿದ್ದ ಟ್ರಕ್ಕಿನಿಂದ ಬಿದ್ದ ಚಾಲಕ-ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ

ಕೇಂದ್ರ ಸಚಿವರ ಕಾಶ್ಮೀರ ಭೇಟಿ ಶುರು
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌, ಸಹಾ ಯಕ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಕೈಲಾಶ್‌ ಚೌಧರಿ ಅವರೂ ಗುರುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಜನ ಸಂಪರ್ಕ ಅಭಿಯಾ ನದ ಅಂಗವಾಗಿ ಅವರು ಅಲ್ಲಿಗೆ ತೆರಳಿದ್ದು, ಸಮಾಜದ ವಿವಿಧ ವರ್ಗಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಜತೆಗೆ ಕೇಂದ್ರದ ಯೋಜನೆಗಳನ್ನೂ ಜನರಿಗೆ ತಿಳಿಸಲಿದ್ದಾರೆ. ಹಂತ ಹಂತ ವಾಗಿ ಒಟ್ಟು 70 ಮಂದಿ ಕೇಂದ್ರ ಸಚಿವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next