Advertisement

ತಮಿಳುನಾಡಿನ ಅವನಿಯಪುರಂನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ

03:08 PM Jan 14, 2021 | Team Udayavani |

ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು.

Advertisement

ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ ಒರಟು ಭಾವ ತೋರಿಸಬಹುದೆಂದು ಯೋಚಿಸುವವರಿಗೆ ಸಂದೇಶ ನೀಡಲು ನಾನಿಲ್ಲಿ ಬಂದಿದ್ದೇನೆ ಎಂದರು.

ಇದನ್ನೂ ಓದಿ:ಚರಗ ಚೆಲ್ಲಿ ಭೂತಾಯಿಗೆ ಭಕ್ತಿ ಸಮರ್ಪಣೆ : ರೈತ ಕುಟುಂಬಗಳಿಂದ ಸಡಗರದ ಎಳ್ಳ ಅಮಾವಾಸ್ಯೆ ಆಚರಣೆ

ಜಲ್ಲಿಕಟ್ಟು ಕ್ರೀಡೆ ನಡೆಸಲು ಇಲ್ಲಿ ಮಾಡಿರುವ ವ್ಯವಸ್ಥೆಗಳನ್ನು ನೋಡಿ ಸಂತೋಷವಾಗಿದೆ. ಇದರಿಂದ ಪ್ರಾಣಿಗೆ ಅಥವಾ ಯುವಕರಿಗೆ ಯಾರಿಗೂ ಅಪಾಯವಾಗುವುದಿಲ್ಲ ಎಂದು ರಾಹುಲ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next