Advertisement

ಗುಜರಾತ್‌: ರಾಹುಲ್‌ ಕಾರಿಗೆ ಕಲ್ಲು ತೂರಾಟ

07:30 AM Aug 05, 2017 | Karthik A |

ಧನೇರಾ/ಹೊಸದಿಲ್ಲಿ: ಗುಜರಾತ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್‌ ಮೇಲೆ ದಾಳಿ ನಡೆಸಿದ್ದು ಬಿಜೆಪಿ ಕಾರ್ಯಕರ್ತರು ಎಂದು ಕಾಂಗ್ರೆಸ್‌ ಆರೋಪಿಸಿದೆ.

Advertisement

ಭಾಷಣಕ್ಕೆ ಅಡ್ಡಿ, ಕಾರಿಗೆ ಕಲ್ಲೆಸೆತ:


ನಿವಾರ ಬೆಳಗ್ಗೆ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅನಂತರ, ಲಾಲ್‌ ಚೌಕ್‌ನಿಂದ ಧನೇರಾ ಕಡೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಾಹುಲ್‌ ಕಾರಿನ ಮೇಲೆ ಕಲ್ಲೆಸೆದಿದ್ದಾನೆ. ಆತನನ್ನು ಕೂಡಲೇ ವಶಕ್ಕೆ ಪಡೆಯಲಾಗಿದೆ. ಇದಕ್ಕೂ ಮುನ್ನ, ಲಾಲ್‌ಚೌಕ್‌ನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗಲೂ, ಕೆಲವು ಪ್ರತಿಭಟನಕಾರರು ರಾಹುಲ್‌ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಜತೆಗೆ ಪ್ರಧಾನಿ ಮೋದಿ ಪರ ಘೋಷಣೆ ಕೂಗಿದರು. ಹೀಗಾಗಿ ರಾಹುಲ್‌ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಬೇಕಾಯಿತು. ಈ ಪ್ರದೇಶದ ಶಾಸಕರು ರಾಜ್ಯಸಭೆ ಚುನಾವಣಾ ರಾಜಕೀಯದ ನಾಟಕೀಯ ಬೆಳವಣಿಗೆಯಿಂದಾಗಿ ಸದ್ಯ ಬೆಂಗಳೂರಿನಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next