Advertisement

ರಾಹುಲ್ ಅವರನ್ನು ಅನರ್ಹಗೊಳಿಸುರುವುದು ಕಾಂಗ್ರೆಸ್‌ಗೆ ಪ್ರಚಾರದ ವಿಷಯವಾಗಲಿದೆ: ಮೊಯ್ಲಿ

03:13 PM Apr 03, 2023 | Team Udayavani |

ಬೆಂಗಳೂರು : ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ರಚಾರದ ವಿಷಯವಾಗಲಿದೆ ಮತ್ತು ಇದು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೋಮವಾರ ಹೇಳಿದ್ದಾರೆ.

Advertisement

ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಇದೆ ಮತ್ತು ಭ್ರಷ್ಟಾಚಾರ ವಿಷಯಗಳ ಬಗ್ಗೆ ಪಕ್ಷದ ಪ್ರಚಾರವು ಕೆಲಸ ಮಾಡಿದೆ, ಆದರೆ ಬಿಜೆಪಿ ಪ್ರಬಲ, ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಖಂಡಿತವಾಗಿಯೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ, ಸೂರತ್ ನ್ಯಾಯಾಲಯದ ಶಿಕ್ಷೆ ವಿಧಿಸಿರುವುದು ನಮಗೆ ಪ್ರಚಾರದ ವಿಷಯವಾಗಿದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

ಅನರ್ಹತೆಯ ವಿಷಯ ರಾಜ್ಯದಲ್ಲಿ ಕಾಂಗ್ರೆಸ್‌ನ ರಾಜಕೀಯ ಲಾಭಕ್ಕೆ ಕಾರಣವಾಗುತ್ತದೆಯೇ ಎಂದು ಕೇಳಿದಾಗ, “ಇದು ದೇಶದ ಎಲ್ಲೆಡೆ ಇದೆ, ಸೇಡಿನ ರಾಜಕೀಯ ಉತ್ತುಂಗದಲ್ಲಿದೆ ಎಂದು ತೋರಿಸುತ್ತದೆ.ಈ ವಿಷಯವು ಬಿಜೆಪಿ ಪತನಕ್ಕೆ ಕಾರಣವಾಗುವ ಅಂಶಗಳಲ್ಲಿ ಒಂದಾಗುತ್ತದೆ. ನಮಗೆ ಅನುಕಂಪದ ಅಲೆಯನ್ನು ಸೃಷ್ಟಿಸುತ್ತದೆ ಎಂದರು.

ತಮ್ಮ ಪಕ್ಷದ ಪ್ರಚಾರವು ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಆಕ್ರಮಣಕಾರಿಯಾಗಿದೆ. ಬಿಜೆಪಿ ನರೇಂದ್ರ ಮೋದಿ-ಅಮಿತ್ ಶಾ ಇಮೇಜ್ ಮೇಲೆ ಹೆಚ್ಚು ಕೇಂದ್ರೀಕರಿಸಿದೆ, ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತು ಅವರ ಸೇಡಿನ ರಾಜಕಾರಣ ಬಹಿರಂಗಪಡಿಸುವ ಮೇಲೆ ಕೇಂದ್ರೀಕರಿಸುತ್ತದೆ ಎಂದರು.

ಕರ್ನಾಟಕದಲ್ಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೊಂದಲ ಮೂಡಿಸಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next