Advertisement

ಸರ್ಕಾರದ ನಿರ್ಲಕ್ಷ್ಯದಿಂದ 40 ಲಕ್ಷ ಭಾರತೀಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ: ರಾಹುಲ್

04:39 PM Apr 17, 2022 | Team Udayavani |

ಹೊಸದಿಲ್ಲಿ: ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್, ಕೋವಿಡ್ ನಿಂದಾಗಿ ಸತ್ತವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.

Advertisement

ಟ್ವಿಟರ್‌ನಲ್ಲಿ ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್‌ಶಾಟೊಂದನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕಗೊಳಿಸಲು ವಿಶ್ವ ಆರೋಗ್ಯ ಸಂಸ್ಥೆಯ ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ಈ ವರದಿ ಹೇಳಿಕೊಂಡಿದೆ.

“ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಮತ್ತು ಇತರರನ್ನು ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ!” ವರದಿಯ ಸ್ಕ್ರೀನ್‌ಶಾಟ್‌ನೊಂದಿಗೆ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಜಂತರ್ ಮಂತರ್‌ನಲ್ಲಿ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಧರಣಿ

“ನಾನು ಮೊದಲೇ ಹೇಳಿದ್ದೆ, ಕೋವಿಡ್ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಐದು ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ” ಎಂದು ರಾಹುಲ್ ಹೇಳಿದರು. ‘ಮೋದಿ ಜೀ, ನಿಮ್ಮ ಜವಾಬ್ದಾರಿಯನ್ನು ಪೂರೈಸಿ, ಪ್ರತಿ ಕೋವಿಡ್ ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ನೀಡಿ’ ಎಂದು ಆಗ್ರಹಿಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next