Advertisement

ಶೀಘ್ರ ಸಂಪುಟ ವಿಸ್ತರಣೆ,ನಿಗಮ ಮಂಡಳಿ ನೇಮಕಕ್ಕೆ ರಾಹುಲ್‌ ಸೂಚನೆ !

02:02 PM Jul 08, 2018 | |

ಬೆಂಗಳೂರು: ಕಾಂಗ್ರೆಸ್‌ನಲ್ಲಿ  ಹಲವರು ಅಸಮಾಧಾನ ನುಂಗಿಕೊಂಡಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಗೊಳಿಸಲು ಕೆಪಿಸಿಸಿಗೆ ಸೂಚನೆ ನೀಡಿದ್ದಾರೆ. 

Advertisement

ಈಗಾಗಲೇ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿ ಬಂದಿದ್ದು , ಕೆಪಿಸಿಸಿ ಅಧ್ಯಕ್ಷ  ಸಚಿವ ಸ್ಥಾನಗಳು ಮತ್ತು ನಿಗಮ ಮಂಡಳಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿ ರಾಹುಲ್‌ ಭೇಟಿತಾಗಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. 

ನಿಗಮ ಮಂಡಳಿಯಲ್ಲಿ 20 ಸ್ಥಾನಗಳು ಶಾಸಕರು ಮತ್ತು 30 ಸ್ಥಾನಗಳು ಕಾಯಕರ್ತರಿಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ವಿಧಾನಸಭೆಯ ಮಳೆಗಾಲದ ಅಧಿವೇಶನ ಮುಗಿದ ಒಂದು ವಾರದ ಒಳಗೆ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ. 

Advertisement

Udayavani is now on Telegram. Click here to join our channel and stay updated with the latest news.

Next