Advertisement

29ಕ್ಕೆ ಕಾಂಗ್ರೆಸ್‌ ಬೃಹತ್‌ ಸಮಾವೇಶ

06:55 AM Jan 05, 2018 | Team Udayavani |

ಬೆಂಗಳೂರು: ಜನವರಿ 27 ರಿಂದ ಮೂರು ದಿನ ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜನವರಿ 29 ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಬೆಂಗಳೂರು ಸಮಾವೇಶದ ಮೂಲಕ ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡುವ ಸಾಧ್ಯತೆ ಇದೆ.

Advertisement

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಜನವರಿ 27 ರಂದು ಎಸ್ಟಿ ಸಮುದಾಯ ಸಮಾವೇಶ ನಡೆಯಲಿದ್ದು, ಜ.28 ರಂದು ಬೆಳಿಗ್ಗೆ ಗೌರಿಬಿದನೂರು ತಾಲೂಕಿನ ವಿದುರಾಶ್ವತದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ ಮೈಸೂರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಜನವರಿ 29 ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸುವ ಮೂಲಕ ರಾಹುಲ್‌ ಗಾಂಧಿ ಚುನಾವಣೆ ರಣ ಕಹಳೆ ಊದಲಿದ್ದಾರೆ. ರಾಹುಲ್‌ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಾಗಿ ಜನವರಿ 8 ರಂದು ಎಐಸಿಸಿ ಮಾಧ್ಯಮ ತಂಡ ರಾಜ್ಯಕ್ಕೆ ಆಗಮಿಸಲಿದೆ. ಎಐಸಿಸಿ ಮಿಡಿಯಾ ಕೋ ಆರ್ಡಿನೇಟರ್‌ ಪ್ರಿಯಾಂಕಾ ಚತುರ್ವೇದಿ ನೇತೃತ್ವದ ತಂಡ ಜನವರಿ 8 ರಿಂದ ಮೂರು ದಿನ ರಾಜ್ಯಕ್ಕೆ ಆಗಮಿಸಿ, ಕೆಪಿಸಿಸಿಯ ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next