Advertisement

ಆರ್‌ಎಸ್‌ಎಸ್‌ನ ಕಾರ್ಯಕ್ರಮಕ್ಕೆ ರಾಹುಲ್‌ ಹೋಗಲ್ಲ

09:25 AM Aug 30, 2018 | Team Udayavani |

ಮುಂಬಯಿ: ಸದ್ಯದಲ್ಲೇ ನಡೆಯಲಿರುವ ಆರ್‌ಎಸ್‌ಎಸ್‌ನ ಕಾರ್ಯ ಕ್ರ ಮಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಗೆ ಆಹ್ವಾನ ನೀಡಲಾಗುತ್ತದೆ ಎಂಬ ಸುದ್ದಿಗೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ರಾಹುಲ್‌ ಅದರಲ್ಲಿ ಭಾಗಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

“ಕಾರ್ಯಕ್ರಮಕ್ಕೆ ಸಂಬಂಧಿಸಿ  ಆರ್‌ಎಸ್‌ಎಸ್‌ನಿಂದ ಯಾವುದೇ ಆಮಂತ್ರಣ ಬಂದಿಲ್ಲ. ಅದು ಬಂದ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆದರೆ, ರಾಹುಲ್‌ ಅವರಿಗೆ ಆಹ್ವಾನ ನೀಡುವ ವಿಚಾರ ರಾಜಕೀಯ ಉದ್ದೇಶಗಳನ್ನು ಹೊಂದಿರುವುದು ಸ್ಪಷ್ಟ. ಹಾಗಾಗಿ, ಅದರಲ್ಲಿ ಪಾಲ್ಗೊಳ್ಳಲು ನನ್ನ  ವಿರೋಧವಿದೆ” ಎಂದಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next