ಗೊತ್ತಾಗುತ್ತಿಲ್ಲ. ಈ ವಿಷಯದಲ್ಲಿ ಸದ್ಯಕ್ಕೆ ಯಾವುದೇ ಗೊಂದಲ ಬೇಡ. ಚುನಾವಣೆಗೆ ಮುಂಚೆ ಈ ವಿಷಯ ಅಪ್ರಸ್ತುತ. ಕಾಂಗ್ರೆಸ್ ಪೂರ್ಣ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಅವರೇ ಪ್ರಧಾನಿ ಆಗುತ್ತಾರೆ ಎನ್ನುವ ನಂಬಿಕೆ ತಮ್ಮದು ಎಂದರು.
Advertisement
ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯ ತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಎಲ್ಲ ಪಕ್ಷದವರು ಸೇರಿ ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಎದುರಿಸಬೇಕೆನ್ನುವ ವಿಚಾರವಿದೆ. ನಂತರ, ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದವರೆಗೆ ಯಾರಿಗೆ ಬೆಂಬಲವಿರುತ್ತದೆಯೋ ಅವರು ಪ್ರಧಾನಿಯಾಗುತ್ತಾರೆ ಎಂದರು.