Advertisement

ರಾಹುಲ್‌ ಭೇಟಿ ಮಾಡಿದ ಎಚ್‌ಡಿಕೆ

12:57 AM May 31, 2019 | Lakshmi GovindaRaj |

ಬೆಂಗಳೂರು: ನರೇಂದ್ರಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಿದರು.

Advertisement

ಲೋಕಸಭೆ ಚುನಾವಣೆ ಸೋಲಿಗೆ ಕಾರಣ, ಮೈತ್ರಿ ಧರ್ಮ ಕೆಲವೆಡೆ ಪಾಲನೆ ಆಗದಿರುವುದು, ನಾಯಕರ ನಡುವಿನ ಸಮನ್ವಯ ಕೊರತೆ ಮತ್ತಿತರ ವಿಚಾರಗಳ ಬಗ್ಗೆ ರಾಹುಲ್‌ ಗಾಂಧಿ ಜತೆ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಂಪೂರ್ಣ ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗಬಾರದು. ಸರ್ಕಾರ ಮುಂದುವರಿಯಬೇಕು. ಏನಾದರೂ ಸಮಸ್ಯೆ ಇದ್ದರೆ ಖುದ್ದು ನಾನೇ ಮಧ್ಯಪ್ರವೇಶ ಮಾಡಿ ಬಗೆಹರಿಸುತ್ತೇನೆ ಎಂದು ರಾಹುಲ್‌ಗಾಂಧಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು. ಸಚಿವರಾದ ಸಾ.ರಾ.ಮಹೇಶ್‌, ಬಂಡೆಪ್ಪ ಕಾಶೆಂಪೂರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next