Advertisement
ಬೂಲ್ಗಡಿ ಗ್ರಾಮದಲ್ಲಿನ ಮನೆಗೆ ತೆರಳಿದ ಪ್ರಿಯಾಂಕ- ರಾಹುಲ್, ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದಾರೆ. ಮೃತ ಯುವತಿಯ ತಾಯಿ ಯನ್ನು ಪ್ರಿಯಾಂಕಾ ಆಲಿಂಗಿಸಿ ಕೊಂಡು ಸಮಾಧಾನ ಹೇಳಿದ್ದಾರೆ. ಬಳಿಕ ಮಾತ ನಾಡಿದ ರಾಹುಲ್, “ಸಂತ್ರಸ್ತೆಯ ಕುಟುಂಬದ ಧ್ವನಿಯನ್ನು ಹತ್ತಿಕ್ಕಲು ಯಾವ ಶಕ್ತಿಗೂ ಸಾಧ್ಯವಿಲ್ಲ’ ಎಂದಿದ್ದಾರೆ. ಇದೇ ವೇಳೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಸಿಎಂ ಯೋಗಿ ಆದಿತ್ಯನಾಥ್ ಶನಿವಾರ ಆದೇಶ ಹೊರಡಿಸಿದ್ದಾರೆ.
Related Articles
ಹತ್ರಾಸ್ ಪ್ರಕರಣ ಖಂಡಿಸಿ ಕೋಲ್ಕತಾದಲ್ಲಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಶನಿವಾರ ಭಾರೀ ರ್ಯಾಲಿ ನಡೆದಿದೆ. ಲಕ್ನೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಅವರ ಕಾರನ್ನು ಅಡ್ಡಗಟ್ಟಿದ ಘಟನೆಯೂ ವರದಿಯಾಗಿದೆ.
Advertisement
ಮಂಪರು ಪರೀಕ್ಷೆ ಜಿಲ್ಲಾಧಿಕಾರಿ-ಎಸ್ಪಿಗೆ ಮಾಡಿಸಿ!ನಾವು ಅಷ್ಟೊಂದು ಬೇಡಿಕೊಂಡರೂ ಪೊಲೀಸರು ನನ್ನ ಮಗಳ ಮೃತದೇಹವನ್ನು ಕೂಡ ನಮಗೆ ಹಸ್ತಾಂತರಿಸದೇ ಸುಟ್ಟುಬಿಟ್ಟರು. ವಿಶೇಷ ತನಿಖಾ ತಂಡವು ಆರೋಪಿಗಳೊಂದಿಗೆ ಕೈಜೋಡಿಸಿದೆ. ಎಸ್ಐಟಿ-ಸಿಬಿಐ ಮೇಲೆ ನಮಗೆ ನಂಬಿಕೆಯಿಲ್ಲ. ಹಾಗಾಗಿ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ನಾವು ಆಗ್ರಹಿಸು ತ್ತೇವೆ ಎಂದು ಸಂತ್ರಸ್ತೆಯ ತಾಯಿ ಕೋರಿಕೊಂಡಿದ್ದಾರೆ. ಜತೆಗೆ, ನಮ್ಮನ್ನೇಕೆ ಮಂಪರು ಪರೀಕ್ಷೆಗೆ ಒಳಪಡಿಸುತ್ತೀರಿ? ಪದೇ ಪದೆ ಸುಳ್ಳು ಹೇಳುತ್ತಿರುವ ಜಿಲ್ಲಾಧಿಕಾರಿ ಮತ್ತು ಎಸ್ಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದವರು ಆಗ್ರಹಿಸಿದ್ದಾರೆ. ನಮ್ಮ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜ ನ್ಯವು ಅತ್ಯಂತ ನಾಚಿಕೆ ಗೇಡಿನ ಸಂಗತಿ. ಇಡೀ ದೇಶ ನಿಮ್ಮತ್ತ ನೋಡುತ್ತಿದೆ. ಅತ್ಯಾ ಚಾರ ವಿರುದ್ಧದ ಯುದ್ಧವನ್ನು ನೀವೇ ಮುನ್ನಡೆಸಬೇಕು. ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ನಾನು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ.
ಕೈಲಾಶ್ ಸತ್ಯಾರ್ಥಿ, ನೊಬೆಲ್ ಪುರಸ್ಕೃತ ಮಕ್ಕಳ ಹಕ್ಕುಗಳ ಹೋರಾಟಗಾರ