Advertisement

ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

01:20 AM Mar 18, 2019 | |

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಸೋಮವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಲಬುರಗಿ ಕ್ಷೇತ್ರದಲ್ಲಿ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಎರಡನೇ ಬಾರಿ ರಾಹುಲ್‌ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಆಗಮಿಸಿದ ಬೆನ್ನಲ್ಲೇ ರಾಹುಲ್‌ಗಾಂಧಿ ಆ ಗಮಿಸುತ್ತಿರುವುದು ಸಾಕಷ್ಟು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಕಲಬುರಗಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದ ನಂತರ
ಬೆಂಗಳೂರಿಗೆ ಆಗಮಿಸಲಿರುವ ಅವರು, ಸಂಜೆ 5 ಗಂಟೆಗೆ ನವೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next