Advertisement

ರಾಹುಲ್‌ ರಾಜ್ಯ ಪ್ರವಾಸ ಮುಂದೂಡಿಕೆ

11:57 PM Aug 12, 2019 | Lakshmi GovindaRaj |

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ತಮ್ಮ ಸ್ವಕ್ಷೇತ್ರ ಕೇರಳದ ವಯನಾಡಿಗೆ ಭೇಟಿ ನೀಡಿರುವ ರಾಹುಲ್‌ ಮಂಗಳವಾರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

Advertisement

ಆದರೆ, ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ವಿಶೇಷವಾಗಿ ಬೆಳಗಾವಿ ಜಿಲ್ಲೆ ಸಂಪೂರ್ಣ ಮುಳುಗಡೆಯಾಗಿರುವುದರಿಂದ ಕೇವಲ ಒಂದು ಗಂಟೆ ಬಂದು ವೀಕ್ಷಣೆ ಮಾಡುವುದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಅಭಿಪ್ರಾಯ ಬೆಳಗಾವಿ ಜಿಲ್ಲೆಯ ಮುಖಂಡರಿಂದ ವ್ಯಕ್ತವಾಗಿರುವುದರಿಂದ ರಾಹುಲ್‌ ರಾಜ್ಯ ಪ್ರವಾಸ ಮುಂದೂಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next