Advertisement

ರಾಹುಲ್‌ ಯೂಟರ್ನ್

12:35 AM Jan 14, 2019 | |

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಶಬರಿಮಲೆ ವಿಚಾರದಲ್ಲಿ ತಮ್ಮ ನಿಲುವು ಬದಲು ಮಾಡಿಕೊಂಡಿದ್ದಾರೆ. 

Advertisement

ಶಬರಿಮಲೆ ದೇಗುಲಕ್ಕೆ ಮಹಿಳೆಯರು ಪ್ರವೇಶಿಸುವ ನಿಟ್ಟಿನಲ್ಲಿ ಪರ ಮತ್ತು ವಿರೋಧ ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ಗೌರವಿಸುವುದಾಗಿಯೂ ಹೇಳಿದ್ದಾರೆ. 

ಈ ಬಗ್ಗೆ ಕೇರಳದ ಜನರು ಹೊಂದಿರುವ ಅಭಿಪ್ರಾಯಗಳನ್ನು ಗೌರವಿಸುತ್ತೇನೆ ಎಂದು ದುಬಾೖನಲ್ಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.  

ಕೇರಳದಲ್ಲಿನ ಕಾಂಗ್ರೆಸ್‌ ನಾಯಕರು ಮತ್ತು ಇತರರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿರುವುದಾಗಿ ರಾಹುಲ್‌ ನುಡಿದಿ ದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ, ಮಹಿಳೆ ಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಮತ್ತು ಸಂಘ ಪರಿವಾರದ ಕ್ರಮಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿತ್ತು.
 

Advertisement

Udayavani is now on Telegram. Click here to join our channel and stay updated with the latest news.

Next