Advertisement

ಮಾರ್ಚ್‌ 18ರಂದು ಕಲಬುರಗಿಗೆ ರಾಹುಲ್‌?

01:21 AM Mar 13, 2019 | |

 ಬೆಂಗಳೂರು: ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಶತ ಪ್ರಯತ್ನ ಮಾಡುತ್ತಿದ್ದು, ಖರ್ಗೆಯವರನ್ನು ಗೆಲ್ಲಿಸಿಕೊಂಡು ಬರಲು ಕಾಂಗ್ರೆಸ್‌ ಕೂಡ ನಿರಂತರ ಯತ್ನ ನಡೆಸುತ್ತಿದೆ.

Advertisement

ಕಳೆದ ವಾರ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಬಂದು ಬಿಜೆಪಿ ಪರ ಅಲೆ ಏಳುವಂತೆ ಮಾಡಿ ಹೋಗಿದ್ದಾರೆ. ಈಗ ಅದೇ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್‌ 18ಕ್ಕೆ ಆಗಮಿಸಲಿದ್ದು, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next