Advertisement

ರಾಜ್ಯ ನಾಯಕರೊಂದಿಗೆ ರಾಹುಲ್‌ ಸಭೆ

07:05 AM Oct 12, 2017 | |

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಕಾರ್ಯಾ ಧ್ಯಕ್ಷರಾದ ದಿನೇಶ್‌ ಗುಂಡೂರಾವ್‌ ಮತ್ತು ಎಸ್‌. ಆರ್‌.ಪಾಟೀಲ್‌ ಹಾಗೂ ನಾಲ್ವರು ಎಐಸಿಸಿ ಕಾರ್ಯದರ್ಶಿಗಳ ಜತೆ ಸಭೆ ನಡೆಸಲಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು ಗುರುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಪ್ರಮುಖವಾಗಿ ಬೂತ್‌ ಮಟ್ಟದ ಸಮಿತಿಗಳ ರಚನೆ ಕುರಿತ ಬೆಳವಣಿಗೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಹುಲ್‌ ಸೂಚಿಸಿದಂತೆ ಸೆ. 15ರೊಳಗೆ ಎಲ್ಲ ಸಮಿತಿಗಳ ರಚನೆಯಾಗಬೇಕಿತ್ತು. ಆದರೆ, ಅಕ್ಟೋಬರ್‌ ಆರಂಭವಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಈ ಕುರಿತು ಮಾಹಿತಿ ಪಡೆಯಲಿದ್ದಾರೆಂದು ತಿಳಿದು ಬಂದಿದೆ.ಅಕ್ಟೋಬರ್‌ ತಿಂಗಳಾಂತ್ಯಕ್ಕೆ ಬೆಂಗಳೂರಿನಲ್ಲಿ ಬೂತ್‌ ಮಟ್ಟದ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪದಗ್ರಹಣಕ್ಕೆ ಮನವಿ?: ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಶೀಘ್ರವೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದ ಅವರ ಅಧಿಕಾರ ಪದಗ್ರಹಣವನ್ನು ಕರ್ನಾಟಕದಲ್ಲಿಯೇ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಕಾರ್ಯಕಾರಿಣಿಯನ್ನು ರಾಜ್ಯದಲ್ಲಿಯೇ ನಡೆಸುವಂತೆ ರಾಜ್ಯ ನಾಯಕರು ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next