Advertisement

ರಾಹುಲ್ ರಾಜೀನಾಮೆ ಸಮಂಜಸವಲ್ಲ: ಖರ್ಗೆ

01:34 AM May 25, 2019 | Sriram |

ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಕೇಳ್ಳೋದು ಸಮಂಜಸವಲ್ಲ’ ಎಂದು ಮಾಜಿ ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ದುಡಿದಷ್ಟು, ಓಡಾಡಿದಷ್ಟು ನಮ್ಮಲ್ಲಿ ಬೇರೆ ನಾಯಕರ್ಯಾರೂ ದುಡಿದಿಲ್ಲ. ರಾಹುಲ್ ಗಾಂಧಿಯೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದರು.

ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಕುರಿತು ಸಮಾಲೋಚಿಸಲು ಶನಿವಾರ (ಮೇ 25) ಬೆಳಗ್ಗೆ 11ಗಂಟೆಗೆ ನವದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲ ರಾಜ್ಯಗಳ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸದಸ್ಯರು ಪಾಲ್ಗೊಳ್ಳುತ್ತಾರೆ. ಎಲ್ಲ ವಿಚಾರಗಳು ಚರ್ಚೆಗೆ ಬರಲಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next