Advertisement

Raichur;ಆಶ್ರಮದ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಹಲ್ಲೆ, ಕತ್ತಲೆಕೋಣೆಯಲ್ಲಿ ಹಾಕಿ ಹಿಂಸೆ ಆರೋಪ

03:11 PM Aug 03, 2024 | Team Udayavani |

ರಾಯಚೂರು: ಇಲ್ಲಿನ ರಾಮಕೃಷ್ಣ ಆಶ್ರಮದಲ್ಲಿ ಬಾಲಕನೊಬ್ಬನ ಮೇಲೆ ಸ್ವಾಮೀಜಿ ಹಲ್ಲೆ ಮಾಡಿದ ಘಟನೆ ನಡೆದಿದೆ.

Advertisement

ಸ್ವಾಮೀಜಿಯ ಪೆನ್ ಬಚ್ಚಿಟ್ಟಿದ್ದಕ್ಕೆ ಕಳ್ಳತನದ ಆರೋಪದಡಿ ಬಾಲಕನ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಕಣ್ಣಿಗೆ ಬಟ್ಟೆ ಕಟ್ಟಿ ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿ ವಿಕೃತ ಮೆರೆದಿದ್ದಾಗಿ ಪೋಷಕರು ಆರೋಪಿಸಿದ್ದಾರೆ.

ಆಶ್ರಮದ ಮುಖ್ಯಸ್ಥ ಪಿ.ವೇಣುಗೋಪಾಲ ಬಾಲಕ ಶ್ರವಣ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಗೆ ಬಾಲಕಾರ್ಮಿಕ ರಕ್ಷಣಾಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಪಡೆಯುತ್ತಿದೆ.

ಹಲ್ಲೆಯಿಂದ ಬಾಲಕನ ಮುಖ, ಕಣ್ಣಿಗೆ ಗಂಭೀರ ಗಾಯಗಳಾಗಿದ್ದು, ಜನತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next